ಬಾಗಿನ ಅರ್ಪಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಜೀವ ನದಿ ಕೃಷ್ಣೆಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿದರು.

ಬಾಗಲಕೋಟೆ: ಉತ್ತರ ಕರ್ನಾಟಕದ ಜೀವ ನದಿ ಕೃಷ್ಣೆಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿದರು.

ಬಸವರಾಜ ಬೊಮ್ಮಾಯಿ ಅವರು ಇಂದು ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು.

ಸಿಎಂ ಆದ ಬಳಿಕ ಬೊಮ್ಮಾಯಿ ಅವರ ಮೊದಲ ಬಾಗಲಕೋಟೆ ಪ್ರವಾಸ ಇದಾಗಿದ್ದು, ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಲಮಟ್ಟಿಗೆ ಆಗಮಿಸಿದರು. ಸಿಎಂ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಮೂರು ಅರ್ಚಕರು ಗಂಗಾಮಾತೆಗೆ ಪೂಜೆ ನೇರವೇರಿಸಿದರು. ನಂತರ ನದಿಯ ಬಳಿ ಸೀರೆ, ಕುಪ್ಪಸ, ಹಣ್ಣು, ಹೂವು ಹಾಗೂ ಉಡಿ ತುಂಬುವ ಸಾಮಗ್ರಿಗಳನ್ನೊಳಗೊಂಡ ಬಾಗಿನವನ್ನು ಕೃಷ್ಣೆಯ ಮಡಿಲಿಗೆ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ, ಉಮೇಶ ಕತ್ತಿ, ಸಂಸದ ಪಿ.ಸಿ. ಗದ್ದಿಗೌಡರ್ ಶಾಸಕರಾದ ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ್, ಬಸನಗೌಡ ಪಾಟೀಲ ಯತ್ನಾಳ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ ಮತ್ತಿತರರಿದ್ದರು. ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್  ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ: ಇರಾನ್ ಪ್ರಮುಖ ಸೇತುವೆ ಧ್ವಂಸ, ತಡವಾಗುವ ಮುನ್ನ ಶಾಂತಿ ಒಪ್ಪಂದಕ್ಕೆ ಬನ್ನಿ; ಟೆಹ್ರಾನ್'ಗೆ ಟ್ರಂಪ್ ಎಚ್ಚರಿಕೆ

'ನಾನಿನ್ನೂ IPL ಮುಖ್ಯಸ್ಥನಾಗಿದ್ರೆ ತಕ್ಷಣವೇ ಸಂಜೀವ್ ಗೋಯೆಂಕಾ ಬ್ಯಾನ್' ಮಾಡ್ತಿದೆ- ಲಲಿತ್ ಮೋದಿ

ಡಾಕ್ಟರ್ ಮಗ ಡಾಕ್ಟರ್ ಆಗ್ತಾನೆ, MLA ಮಗ MLA ಆಗೋದ್ರಲ್ಲಿ ತಪ್ಪೇನು?: ಕುಟುಂಬ ರಾಜಕೀಯಕ್ಕೆ ಎಂ.ಬಿ.ಪಾಟೀಲ್ ಸಮರ್ಥನೆ

LPG ಬಿಕ್ಕಟ್ಟು ತೀವ್ರ: ಬೆಂಗಳೂರಿನ ಆಟೋ ಚಾಲಕರ ಬದುಕು ಬೀದಿಗೆ!

IPL 2026: ರನ್ ಕದಿಯಲು ಹೋಗಿ ರನೌಟ್ ಆದ ರಘುವಂಶಿ, ಮೈದಾನದಲ್ಲೇ ಸಿಟ್ಟಾದ ರಿಂಕ್ ಸಿಂಗ್ !Video

SCROLL FOR NEXT