ಬಾಗಿನ ಅರ್ಪಿಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಜೀವ ನದಿ ಕೃಷ್ಣೆಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿದರು.

ಬಾಗಲಕೋಟೆ: ಉತ್ತರ ಕರ್ನಾಟಕದ ಜೀವ ನದಿ ಕೃಷ್ಣೆಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿದರು.

ಬಸವರಾಜ ಬೊಮ್ಮಾಯಿ ಅವರು ಇಂದು ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು.

ಸಿಎಂ ಆದ ಬಳಿಕ ಬೊಮ್ಮಾಯಿ ಅವರ ಮೊದಲ ಬಾಗಲಕೋಟೆ ಪ್ರವಾಸ ಇದಾಗಿದ್ದು, ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಲಮಟ್ಟಿಗೆ ಆಗಮಿಸಿದರು. ಸಿಎಂ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಮೂರು ಅರ್ಚಕರು ಗಂಗಾಮಾತೆಗೆ ಪೂಜೆ ನೇರವೇರಿಸಿದರು. ನಂತರ ನದಿಯ ಬಳಿ ಸೀರೆ, ಕುಪ್ಪಸ, ಹಣ್ಣು, ಹೂವು ಹಾಗೂ ಉಡಿ ತುಂಬುವ ಸಾಮಗ್ರಿಗಳನ್ನೊಳಗೊಂಡ ಬಾಗಿನವನ್ನು ಕೃಷ್ಣೆಯ ಮಡಿಲಿಗೆ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ, ಉಮೇಶ ಕತ್ತಿ, ಸಂಸದ ಪಿ.ಸಿ. ಗದ್ದಿಗೌಡರ್ ಶಾಸಕರಾದ ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ್, ಬಸನಗೌಡ ಪಾಟೀಲ ಯತ್ನಾಳ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ ಮತ್ತಿತರರಿದ್ದರು. ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್  ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Modi ma*****ch**: ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ ಅಶ್ಲೀಲ ನಿಂದನೆ, BJP ಕೆಂಡಾಮಂಡಲ!

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

SCROLL FOR NEXT