ಯೋಧನ ಕುಟುಂಬಕ್ಕೆ ನಾರಾಯಣಸ್ವಾಮಿ ಭೇಟಿ 
ರಾಜ್ಯ

ಸಚಿವರ ಮಹಾ ಎಡವಟ್ಟು: ಮೃತ ಯೋಧನ ಬದಲಿಗೆ ಬದುಕಿರುವ ಯೋಧನ ಮನೆಗೆ ತೆರಳಿ ನಾರಾಯಣಸ್ವಾಮಿ ಸಾಂತ್ವನ!

ಜನಾಶೀರ್ವಾದ ಕಾರ್ಯಕ್ರಮದ ವೇಳೆ ಅತ್ಯುತ್ಸಾಹದಲ್ಲಿದ್ದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸೂಕ್ತ ಮಾಹಿತಿ ಪಡೆದುಕೊಳ್ಳದೇ ಭಾರಿ ಎಡವಟ್ಟು ಮಾಡಿಕೊಂಡಿಕೊಂಡಿದ್ದಾರೆ.

ಹುಬ್ಬಳ್ಳಿ: ಜನಾಶೀರ್ವಾದ ಕಾರ್ಯಕ್ರಮದ ವೇಳೆ ಅತ್ಯುತ್ಸಾಹದಲ್ಲಿದ್ದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸೂಕ್ತ ಮಾಹಿತಿ ಪಡೆದುಕೊಳ್ಳದೇ ಭಾರಿ ಎಡವಟ್ಟು ಮಾಡಿಕೊಂಡಿಕೊಂಡಿದ್ದಾರೆ.

ಮೃತಪಟ್ಟ ಯೋಧನ ಕುಟುಂಬದ ನಿವಾಸಕ್ಕೆ ಭೇಟಿ‌ ನೀಡಬೇಕಿದ್ದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಬದುಕಿರುವ ಸೈನಿಕನ ಮನೆಗೆ ತೆರಳಿ ಕುಟುಂಬಕ್ಕೆ‌ ಸಾಂತ್ವನ ಹೇಳಿದ್ದಾರೆ. ಮೃತ ಯೋಧನ ಪತ್ನಿಗೆ ನೌಕರಿ ಭರವಸೆಯನ್ನು ನೀಡಿದರು. ಈ ಮೂಲಕ ಸಚಿವ ನಾರಾಯಣಸ್ವಾಮಿ ಅವರು ಯೋಧನ ಕುಟುಂಬದವರ ಮನೆಯ ಹಬ್ಬದ ವಾತಾವರಣವನ್ನೇ ಕಸಿದುಕೊಳ್ಳುವ ಜೊತೆಗೆ ಅವರು ಮುಜುಗರ ಅನುಭವಸುವಂತಾಯಿತು.

ಬಿಜೆಪಿಯ ಜನಾರ್ಶೀವಾದ ಯಾತ್ರೆ ಅಂಗವಾಗಿ ಸಚಿವರು ಮುಳಗುಂದದಲ್ಲಿ ಯೋಧರೊಬ್ಬರ ಮನೆ ಭೇಟಿ ನೀಡುವ ಕಾರ್ಯಕ್ರಮ ಇದಾಗಿತ್ತು. ನಿಗದಿತ ಸಮಯಕ್ಕಿಂತ ತಡವಾಗಿ ಅವಸರದಲ್ಲಿ ಬಂದ ಅವರು ತರಾತುರಿಯಲ್ಲಿ ಯೋಧನ ಕುಟುಂಬದವರ ಯೋಗಕ್ಷೇಮ ವಿಚಾರಿಸಿ, ಜಮೀನು ಹಾಗೂ ಯೋಧನ ಪತ್ನಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿದರು. ಆದರೆ ಕುಟುಂಬಸ್ಥರಿಗೆ ಏನು ತಿಳಿಯಲೇ ಇಲ್ಲ.

ಸ್ಥಳೀಯ ಬಿಜೆಪಿ ಕಾರ್ಯಕರ್ತರೊಬ್ಬರು ಈ ಕಾರ್ಯಕ್ರಮ ಆಯೋಜಿಸಿದ್ದರು,  ಕಳೆದ ವರ್ಷ ಮೃತ ಪಟ್ಟ ಯೋಧನ ಮನೆಗೆ ಸಚಿವರು ಭೇಟಿ ನೀಡಬೇಕಿತ್ತು, ಆದರೆ ತರಾತುರಿಯಲ್ಲಿ ಬದುಕಿರುವ ಯೋಧನ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಆ ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ. ನೌಕರಿ ಜಮೀನಿನ ಭರವಸೆ ನೀಡಿದ ಮೇಲೆ ಕುಟುಂಬಸ್ಥರಿಗೆ ಹೃದಯ ಕಿತ್ತು ಬಾಯಿಗೆ ಬಂದಂತಾಯಿತು. ಆ ವೇಳೆ ಕುಟುಂಬಸ್ಥರು ಯೋಧನಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ. ಇದರಿಂದ ಸಚಿವರು ಮುಜುಗರ ಅನುಭವಿಸುವಂತಾಗಿದೆ.

ಒಂದೂವರೆ ವರ್ಷದ ಹಿಂದೆ ಮಹಾರಾಷ್ಟ್ರದ ಪುಣೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಯೋಧ ಬಸವರಾಜ್ ಹಿರೇಮಠ ಮೃತಪಟ್ಟಿದ್ರು. ಅವರ ಕುಟುಂಬಕ್ಕೆ ಸಾಂತ್ವನ ಹೇಳೋದು ಬಿಟ್ಟು, ನಾರಾಯಣಸ್ವಾಮಿ ಹಾಲಿ ಸೇವೆ ಸಲ್ಲಿಸುತ್ತಿರುವ ಜೀವಂತವಾಗಿರುವ ರವಿಕುಮಾರ್ ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಮೂಲಕ ತಮ್ಮ ನಾರಾಯಣಸ್ವಾಮಿ ಮುಜುಗರಕ್ಕೀಡಾಗಿದ್ದಾರೆ. ಇದೆಲ್ಲಾ ನಡೆದಿರೋದು ಮಾಹಿತಿಯ ಕೊರತೆಯಿಂದ ಎಂದು ಬಿಜೆಪಿ ಕಾರ್ಯಕರ್ತರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT