ಲಕ್ಷ್ಮಿ ಹೆಬ್ಬಾಳ್ಕರ್, ವಿನಯ್ ಕುಲಕರ್ಣಿ (ಸಂಗ್ರಹ ಚಿತ್ರ) 
ರಾಜ್ಯ

ಬೆಳಗಾವಿ: ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗುತ್ತಿರುವ ವಿನಯ್ ಕುಲಕರ್ಣಿ ಸ್ವಾಗತಕ್ಕೆ ಬಂದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ 

ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಬೆಳಗಾವಿಯ ಹಿಂಡಲಗ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಇನ್ನು ಕೆಲವೇ ಹೊತ್ತಿನಲ್ಲಿ ಬಿಡುಗಡೆಯಾಗುತ್ತಿದ್ದಾರೆ.

ಬೆಳಗಾವಿ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಬೆಳಗಾವಿಯ ಹಿಂಡಲಗ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಇನ್ನು ಕೆಲವೇ ಹೊತ್ತಿನಲ್ಲಿ ಬಿಡುಗಡೆಯಾಗುತ್ತಿದ್ದಾರೆ.

ಅವರು ಜೈಲಿನಿಂದ ಹೊರಗೆ ಬರುವಾಗ ಪ್ರೀತಿಯಿಂದ ಮತ್ತು ಸಂತೋಷದಿಂದ ಸ್ವಾಗತಿಸಲು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಅವರ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಜೈಲಿನಿಂದ ಹೊರಗೆ ಜಮಾಯಿಸಿದ್ದಾರೆ.

ಈ ವೇಳೆ ನೂಕು ನುಗ್ಗಲು ಉಂಟಾಗಬಾರದು, ಅಲ್ಲದೆ ಬೆಳಗಾವಿಯಲ್ಲಿ ಕೊರೋನಾ ನಿಮಿತ್ತ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುವುದರಿಂದ ಪೊಲೀಸರು ಅಭಿಮಾನಿಗಳನ್ನು ಚದುರಿಸಲು ಹರಸಾಹಸಪಡುತ್ತಿದ್ದಾರೆ.

ಈ ವೇಳೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಇವತ್ತು ನಮ್ಮೆಲ್ಲರಿಗೆ ಭಾವನಾತ್ಮಕ ದಿನ, ನಮ್ಮೆಲ್ಲರ ಅಣ್ಣ ವಿನಯ್ ಕುಲಕರ್ಣಿಯವರು ಇಂದು ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ, ನಾಳೆ ರಕ್ಷಾ ಬಂಧನವಿದೆ. ಹಬ್ಬದ ಸಮಯದಲ್ಲಿ ಅಣ್ಣ ಹೊರಬರುತ್ತಿರುವುದು ನಮಗೆಲ್ಲರಿಗೂ ಸಂತೋಷ ಎಂದರು.

ವಿನಯ್ ಕುಲಕರ್ಣಿಯವರು ಮಾನಸಿಕವಾಗಿ ಗಟ್ಟಿಯಾಗಿದ್ದಾರೆ, ಆದರೂ ಇನ್ನಷ್ಟು ಧೈರ್ಯ, ಉತ್ಸಾಹ, ಸಂತೋಷ ತುಂಬಲು ನಾವಿಂದು ಇಲ್ಲಿ ಸೇರಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT