ಸಿಎಂ ಬೊಮ್ಮಾಯಿ 
ರಾಜ್ಯ

ಸೋಮವಾರದಿಂದ ಶಾಲೆಗಳ ಆರಂಭ: ಕೆಲ ಶಾಲೆಗಳಿಗೆ ಸಿಎಂ ಬೊಮ್ಮಾಯಿ, ಶಿಕ್ಷಣ ಸಚಿವರ ಭೇಟಿ

ಕೊರೋನಾ ಮುಂಜಾಗ್ರತಾ ಕ್ರಮಗಳೊಂದಿಗೆ ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿದ್ದು, ಈ ಸಂದರ್ಭದಲ್ಲಿ ಬೆಂಗಳೂರಿನ ಕೆಲವು ಶಾಲೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ. 

ಬೆಂಗಳೂರು: ಕೊರೋನಾ ಮುಂಜಾಗ್ರತಾ ಕ್ರಮಗಳೊಂದಿಗೆ ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿದ್ದು, ಈ ಸಂದರ್ಭದಲ್ಲಿ ಬೆಂಗಳೂರಿನ ಕೆಲವು ಶಾಲೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ. 

ಕೊರೊನಾ ಮೂರನೇ ಅಲೆ ಆತಂಕದ ನಡೆವಯೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ನಾಳೆಯಿಂದ ಶಾಲೆಗಳು ಆರಂಭವಾಗುತ್ತಿದ್ದು, ಮೊದಲ ಹಂತದಲ್ಲಿ  9ನೇ ತರಗತಿಯಿಂದ 12ನೇ ತರಗತಿವರೆಗೆ ಆರಂಭವಾಗಲಿದೆ. 

ಶಾಲೆಗಳ ಆರಂಭಿಸಲು ಮುಂದಾಗಿರುವ ರಾಜ್ಯ ಸರ್ಕಾರ ಈಗಾಗಲೇ ಇದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿಯನ್ನೂ ಹೊರಡಿಸಿದೆ. ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಾನೂ ಶಾಲೆಗೆ ಹೋಗುತ್ತೇನೆಂದು ಹೇಳುವ ಮೂಲಕ ಮಕ್ಕಳು ಹಾಗೂ ಪೋಷಕರಲ್ಲಿರುವ ಆತಂಕವನ್ನು ಹೋಗಲಾಡಿಸುವ ಪ್ರಯತ್ನವನ್ನು ಮಾಡಿದ್ದಾರೆ. 

ಶಾಲೆಗಳ ಆರಂಭ ಕುರಿತು ನಾವು ಎಷ್ಟು ಗಂಭೀರವಾಗಿದ್ದೇವೆಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಹೀಗಾಗಿ ಸ್ವತಃ ಮುಖ್ಯಮಂತ್ರಿಗಳೇ ಶಾಲೆಗಳಿಗೆ ಭೇಟಿ ನೀುಡತ್ತಿದ್ದಾರೆಂದು ಶಿಕ್ಷಣ ಸಚಿವ ನಾಗೇಶ್ ಅವರು ಹೇಳಿದ್ದಾರೆ. 

ಈ ನಡುವೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಶಾಲೆಗೆ ಬರುವಂತೆ ಮನವಿ ಮಾಡಿಕೊಂಡಿದ್ದಾರೆ. 

ಸರ್ಕಾರ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿದೆ. ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಶಿಕ್ಷಕರು ಹಾಗೂ ಇತರೆ ಬೋದಕೇತರ ಸಿಬ್ಬಂದಿಗಳಿಗೆ ಲಸಿಕೆಗಳನ್ನು ನೀಡಲಾಗಿದೆ. ಶಾಲೆಗಳಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಬ್ಯಾಚ್ ಗಳಂತೆ ತರಗತಿಗಳನ್ನು ನಡೆಸಲಾಗುತ್ತದೆ. ಪೋಷಕರೂ ಕೂಡ ಲಸಿಕೆ ಹಾಕಿಸಿಕೊಳ್ಳಬೇಕು ಹಾಗೂ ಮಕ್ಕಳ ಆರೋಗ್ಯದ ಮೇಲೆ ಗಮನ ಹರಿಸುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel