ಸಾಂದರ್ಭಿಕ ಚಿತ್ರ 
ರಾಜ್ಯ

ಬಾಗಲಕೋಟೆ: ಒಂದೇ ಕುಟುಂಬದ ಮೂವರು ನೀರು ಪಾಲು

ನದಿಯಲ್ಲಿ‌ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬಾದಾಮಿ ತಾಲೂಕಿನ ಶಿವಯೋಗಿ ಮಂದಿರದ ಬಳಿ ನಡೆದಿದೆ. ಮೃತರನ್ನು ವಿಶ್ವನಾಥ್ ಮಾವಿನ ಮರದ (40), ಪತ್ನಿ ಶ್ರಿದೇವಿ ಮಾವಿನಮರದ (32) ಹಾಗೂ ಮಗಳು ನಂದಿನಿ (12) ಎಂದು ಗುರುತಿಸಲಾಗಿದೆ.

ಬಾಗಲಕೋಟೆ: ನದಿಯಲ್ಲಿ‌ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬಾದಾಮಿ ತಾಲೂಕಿನ ಶಿವಯೋಗಿ ಮಂದಿರದ ಬಳಿ ನಡೆದಿದೆ. ಮೃತರನ್ನು ವಿಶ್ವನಾಥ್ ಮಾವಿನ ಮರದ (40), ಪತ್ನಿ ಶ್ರಿದೇವಿ ಮಾವಿನಮರದ (32) ಹಾಗೂ ಮಗಳು ನಂದಿನಿ (12) ಎಂದು ಗುರುತಿಸಲಾಗಿದೆ.

ಮೃತರು ಮೂಲತಃ ಗುಳೇದಗುಡ್ಡ ತಾಲ್ಲೂಕಿನ ಕೊಟೇಕಲ್ ಗ್ರಾಮದವರಾಗಿದ್ದು, ಗದಗ ಜಿಲ್ಲೆಯ ರೋಣದಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.

ಶಿವಯೋಗ ಮಂದಿರಕ್ಕೆ ತೆರಳಿದ್ದ ಇರುವ ಉಪಹಾರ ಸೇವಿಸಲು ಮಲಪ್ರಭಾ ನದಿ ದಡದಲ್ಲಿ ಕುಳಿತಿದ್ದರು. ಉಪ ಹಾರ ಸೇವಿಸಿ ನಂದಿನಿ ಮಾವಿನ ಮರದ ನದಿಯಲ್ಲಿ ಕೈ ತೊಳೆಯಲು ಹೋದಾಗ ಜಾರಿ ನದಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ವಿಶ್ವನಾಥ್ ಹಾಗೂ ಶ್ರಿದೇವಿ ದಂಪತಿ ನೀರಿಗೆ ಇಳಿದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿ ಶ್ರೀದೇವಿ ಅವರ ಶವವನ್ನು ಹೊರತೆ ತೆಗೆಯಲಾಗಿದೆ. ಆದರೆ, ವಿಶ್ವನಾಥ್ ಹಾಗೂ ಅವರ ಮಗಳು ನಂದಿನಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಬಾದಾಮಿ ಪಿಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT