ಕಾಬುಲ್ ವಿಮಾನ ನಿಲ್ದಾಣದಲ್ಲಿ ಕುಳಿತಿರುವ ಆಫ್ಘನ್ ಮಹಿಳೆಯರು 
ರಾಜ್ಯ

ಅಫ್ಘಾನಿಸ್ತಾನ: ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಇಬ್ಬರು ಪಾದ್ರಿಗಳು ಇಂದು ತಾಯ್ನಾಡಿಗೆ

ಅಫ್ಘಾನಿಸ್ತಾನ ರಾಷ್ಟ್ರವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದುಕೊಂಡ ಬಳಿಕ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಇಬ್ಬರು ಪಾದ್ರಿಗಳು ಭಾನುವಾರ ತಾಯ್ನಾಡಿಗೆ ಮರಳುತ್ತಿದ್ದಾರೆ. 

ಮಂಗಳೂರು: ಅಫ್ಘಾನಿಸ್ತಾನ ರಾಷ್ಟ್ರವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದುಕೊಂಡ ಬಳಿಕ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ಇಬ್ಬರು ಪಾದ್ರಿಗಳು ಇಂದು ತಾಯ್ನಾಡಿಗೆ ಮರಳುತ್ತಿದ್ದಾರೆ. 

ನೋಡೆಲ್‌ ಅಧಿಕಾರಿ ಎಡಿಜಿಪಿ ಉಮೇಶ್ ಕುಮಾರ್‌ ಅವರು ಮಾತನಾಡಿ, ಮಂಗಳೂರಿನ ಫಾ.ಜೆರೋಮ್‌ ಸಿಕ್ವೇರಾ ಮತ್ತು ತೀರ್ಥಹಳ್ಳಿಯ ಫಾ. ರಾಬರ್ಟ್‌ ರೊಡ್ರಿಗಸ್‌ ಅವರು ಭಾನುವಾರ ಮಂಗಳೂರಿಗೆ ಆಗಮಿಸುತ್ತಿದ್ದಾರೆಂದು ಹೇಳಿದ್ದಾರೆ. 

ಫಾದರ್ ರೋಡ್ರಿಗಸ್ ಅವರ ಸಂಬಂಧಿಕರು ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದರು. ಭಾರತಕ್ಕೆ ಮರಳುವಂತೆ ಮಾಡುವಂತೆ ನೆರವು ಕೋರಿದ್ದರು. ಬಳಿಕ ರೋಡ್ರಿಗಸ್ ಅವರನ್ನು ಸಂಪರ್ಕಿಸಲು ಪ್ರಯತ್ನ ನಡೆಸಲಾಯಿತು. ಸಂಪರ್ಕ ಸಾಧಿಸಿದ ಬಳಿಕ ಈ ಮನವಿಯನ್ನು ವಿದೇಶಾಂಗ ಸಚಿವಾಲಯ ಅಧಿಕಾರಿಗಳಿಗೆ ತಿಳಿಸಲಾಯಿತು. ಇದೀಗ ಈ ಸಮಸ್ಯೆಯನ್ನು ವಿದೇಶಾಂಗ ಸಚಿವಾಲಯ ಬಗೆಹರಿಸಿದ್ದು, ಇಬ್ಬರೂ ಪಾದ್ರಿಗಳೂ ತಾಯ್ನಾಡಿಗೆ ಮರಳುತ್ತಿದ್ದಾರೆಂದು ತಿಳಿಸಿದ್ದಾರೆ. 

ಭಾನುವಾರ ಕಾಬುಲ್ ನಿಂದ ಹೊರಡುವ ಭಾರತೀಯ ವಾಯುಪಡೆಯ ಎರಡು ವಿಮಾನಗಳಲ್ಲಿ 250 ಭಾರತೀಯರ ಜೊತೆಗೆ ಇಬ್ಬರು ಪಾದ್ರಿಗಳೂ ಇರಲಿದ್ದಾರೆಂದು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video