ವೆಂಕಯ್ಯ ನಾಯ್ಡು 
ರಾಜ್ಯ

ರಾಜಭವನದಲ್ಲಿ ಮಕ್ಕಳೊಂದಿಗೆ ರಕ್ಷಾ ಬಂಧನ ಆಚರಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ರಾಷ್ಟ್ರೀಯ ಸಹೋದರತೆ ಬಂಧವನ್ನು ಸಾರುವ ರಕ್ಷಾ ಬಂಧನವನ್ನು ಪುಟ್ಟ ಪುಟ್ಟ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ಆಚರಿಸಿದರು.

ಬೆಂಗಳೂರು: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ರಾಷ್ಟ್ರೀಯ ಸಹೋದರತೆ ಬಂಧವನ್ನು ಸಾರುವ ರಕ್ಷಾ ಬಂಧನವನ್ನು ಪುಟ್ಟ ಪುಟ್ಟ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ಆಚರಿಸಿದರು.

ಭಾನುವಾರ ರಾಜಭವನದಲ್ಲಿ ಮಕ್ಕಳು ಉಪರಾಷ್ಟ್ರಪತಿಗಳಿಗೆ ರಾಖಿ ಕಟ್ಟಿ, ಹಣೆಗೆ ತಿಲಕವಿಟ್ಟು, ಆರತಿ ಮಾಡಿ ಸಂಭ್ರಮಿಸಿದರು.  ಉಪರಾಷ್ಟ್ರಪತಿಗಳು ಮಕ್ಕಳಿಗೆ ಸಿಹಿ ನೀಡಿ ಆಶೀರ್ವದಿಸಿದರು.

ನಂತರ ಮಾತನಾಡಿದ ಅವರು, ರಕ್ಷಾ ಬಂಧನವು ಐಕ್ಯತೆ ಸಾರುವ ಬಂಧನವಾಗಿದೆ. ಪ್ರತಿಯೊಂದು ಹೆಣ್ಣು ಮಗುವಿನ ರಕ್ಷಣೆ ಮಾಡುವುದು ಸಹೋದರತೆಯ ಜವಾಬ್ದಾರಿಯಾಗಿರುತ್ತದೆ. ರಕ್ತ ಸಂಬಂಧದ ಜೊತೆಗೆ ಸಮಾಜದ ಪ್ರತಿ ಹೆಣ್ಣು ಮಗುವನ್ನು ನಾವು ರಕ್ಷಿಸಬೇಕು. ಮಹಿಳೆಯನ್ನು ಗೌರವಿಸುವುದರ ಜೊತೆಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕು. ಈ ಮೂಲಕ ದೇಶದ ಐಕ್ಯತೆ ಬಲಪಡಿಸಿದಂತಾಗುತ್ತದೆ ಎಂದರು.

ರಕ್ಷಾ ಬಂಧನ ಹಬ್ಬ ಸಂಬಂಧವನ್ನು ಗಟ್ಟಿಗೊಳಿಸುವ ಪವಿತ್ರ ಹಬ್ಬವಾಗಿದ್ದು, ಇದನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ನಮ್ಮ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಹೆಣ್ಣು ಮಕ್ಕಳನ್ನು ರಕ್ಷಿಸಿ, ಘನತೆಯನ್ನು ಎತ್ತಿ ಹಿಡಿಯುತ್ತಾರೆ ಎಂಬ ನಂಬಿಕೆ ಇದೆ ಎಂದು ಹೇಳುವ ಮೂಲಕ ದೇಶದ ಜನತೆಗೆ ರಕ್ಷಾ ಬಂಧನ ಹಬ್ಬದ ಶುಭ ಕೋರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT