ರಾಜ್ಯ

ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಎಫ್ ಪಿ ಒ ಸ್ಥಾಪಿಸಲು ಕೇಂದ್ರ ಸರ್ಕಾರ ಚಿಂತನೆ: ಶೋಭಾ ಕರಂದ್ಲಾಜೆ

Shilpa D

ಮಂಗಳೂರು: ಮುಂದಿನ ದಿನಗಳಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ರೈತ ಉತ್ಪಾದನಾ ಸಂಸ್ಥೆಗಳನ್ನು (ಎಫ್‌ಪಿಒ) ಆರಂಭಿಸಲು ಕೇಂದ್ರ ಸರ್ಕಾರ ಯೋಜಿಸಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಹೇಳಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಭಾನುವಾರ ಅಧಿಕಾರ ಸ್ವೀಕರಿಸಿದ ನಂತರ ಶೋಭಾ ಮೊದಲ ಬಾರಿಗೆ ದಕ್ಷಿಣ ಕನ್ನಡಕ್ಕೆ ಭೇಟಿ ನೀಡಿದರು. ಅವರು ಬಂಟ್ವಾಳದ ಪ್ರವಾಸಿ ಮಂದಿರದಲ್ಲಿ ಶಾಸಕ ರಾಜೇಶ್ ನಾಯ್ಕ್ ಮತ್ತು ಸ್ಥಳೀಯ ನಾಯಕರೊಂದಿಗೆ ಚರ್ಚಿಸಿದರು. 

ಶಾಸಕ ರಾಜೇಶ್ ನಾಯ್ಕ್ ಅವರು ಭಗವದ್ಗೀತೆಯ ಪ್ರತಿಯನ್ನು ನೀಡುವ ಮೂಲಕ ಅಭಿನಂದಿಸಿದರು. ರಕ್ಷಾ ಬಂಧನದ ಸಂದರ್ಭದಲ್ಲಿ ರಾಖಿ ಕಟ್ಟಿದರು. ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕೋಟಿ-ಚೆನ್ನಯ ಪುಸ್ತಕದ ಪ್ರತಿಯನ್ನು ನೀಡಿದರು.

ನಂತರ ಅವರು ಸುಳ್ಯದಲ್ಲಿರುವ ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದರು. ಈ ವೇಳೆ  ಮೀನುಗಾರಿಕೆ ಸಚಿವ ಎಸ್ ಅಂಗಾರ ಹಾಗೂ ತಾಲ್ಲೂಕು ಪಕ್ಷದ ಮುಖಂಡರು ಸಚಿವರನ್ನು ಸನ್ಮಾನಿಸಿದರು. ಶೋಭಾ ಮತ್ತು ಅಂಗಾರ ಕೂಡ ಪರಸ್ಪರ ರಾಖಿ ಕಟ್ಟಿದರು.

ಕಡಬ ತಾಲೂಕಿನಲ್ಲಿರುವ ತಮ್ಮ ಸ್ವಗ್ರಾಮ ಚಾರ್ವಾಕಕ್ಕೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ ಸೋಮವಾರ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ಪೂಜೆಯಲ್ಲಿ ಪಾಲ್ಗೋಳ್ಳಲಿದ್ದಾರೆ. ಸಚಿವೆ ಶೋಭಾ ಅವರು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ವೀಡಿಯೊ ಕಾನ್ಫರೆನ್ಸ್ ಮೂಲಕ ಏಜೆನ್ಸಿಗಳು ಮತ್ತು ಕೃಷಿ ವ್ಯವಹಾರ ಕೇಂದ್ರದ ಅಡಿಯಲ್ಲಿ 75000 ಸಶಕ್ತ ಕೃಷಿ ಪ್ರೇಮಿಗಳೊಂದಿಗೆ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ.

SCROLL FOR NEXT