ಶೋಭಾ ಕರಂದ್ಲಾಜೆಗೆ ರಾಖಿ ಕಟ್ಟಿದ ಅಂಗಾರ 
ರಾಜ್ಯ

ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಎಫ್ ಪಿ ಒ ಸ್ಥಾಪಿಸಲು ಕೇಂದ್ರ ಸರ್ಕಾರ ಚಿಂತನೆ: ಶೋಭಾ ಕರಂದ್ಲಾಜೆ

ಮುಂದಿನ ದಿನಗಳಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ರೈತ ಉತ್ಪಾದನಾ ಸಂಸ್ಥೆಗಳನ್ನು (ಎಫ್‌ಪಿಒ) ಆರಂಭಿಸಲು ಕೇಂದ್ರ ಸರ್ಕಾರ ಯೋಜಿಸಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಹೇಳಿದ್ದಾರೆ.

ಮಂಗಳೂರು: ಮುಂದಿನ ದಿನಗಳಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ರೈತ ಉತ್ಪಾದನಾ ಸಂಸ್ಥೆಗಳನ್ನು (ಎಫ್‌ಪಿಒ) ಆರಂಭಿಸಲು ಕೇಂದ್ರ ಸರ್ಕಾರ ಯೋಜಿಸಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಹೇಳಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಭಾನುವಾರ ಅಧಿಕಾರ ಸ್ವೀಕರಿಸಿದ ನಂತರ ಶೋಭಾ ಮೊದಲ ಬಾರಿಗೆ ದಕ್ಷಿಣ ಕನ್ನಡಕ್ಕೆ ಭೇಟಿ ನೀಡಿದರು. ಅವರು ಬಂಟ್ವಾಳದ ಪ್ರವಾಸಿ ಮಂದಿರದಲ್ಲಿ ಶಾಸಕ ರಾಜೇಶ್ ನಾಯ್ಕ್ ಮತ್ತು ಸ್ಥಳೀಯ ನಾಯಕರೊಂದಿಗೆ ಚರ್ಚಿಸಿದರು. 

ಶಾಸಕ ರಾಜೇಶ್ ನಾಯ್ಕ್ ಅವರು ಭಗವದ್ಗೀತೆಯ ಪ್ರತಿಯನ್ನು ನೀಡುವ ಮೂಲಕ ಅಭಿನಂದಿಸಿದರು. ರಕ್ಷಾ ಬಂಧನದ ಸಂದರ್ಭದಲ್ಲಿ ರಾಖಿ ಕಟ್ಟಿದರು. ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕೋಟಿ-ಚೆನ್ನಯ ಪುಸ್ತಕದ ಪ್ರತಿಯನ್ನು ನೀಡಿದರು.

ನಂತರ ಅವರು ಸುಳ್ಯದಲ್ಲಿರುವ ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದರು. ಈ ವೇಳೆ  ಮೀನುಗಾರಿಕೆ ಸಚಿವ ಎಸ್ ಅಂಗಾರ ಹಾಗೂ ತಾಲ್ಲೂಕು ಪಕ್ಷದ ಮುಖಂಡರು ಸಚಿವರನ್ನು ಸನ್ಮಾನಿಸಿದರು. ಶೋಭಾ ಮತ್ತು ಅಂಗಾರ ಕೂಡ ಪರಸ್ಪರ ರಾಖಿ ಕಟ್ಟಿದರು.

ಕಡಬ ತಾಲೂಕಿನಲ್ಲಿರುವ ತಮ್ಮ ಸ್ವಗ್ರಾಮ ಚಾರ್ವಾಕಕ್ಕೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ ಸೋಮವಾರ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ಪೂಜೆಯಲ್ಲಿ ಪಾಲ್ಗೋಳ್ಳಲಿದ್ದಾರೆ. ಸಚಿವೆ ಶೋಭಾ ಅವರು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ವೀಡಿಯೊ ಕಾನ್ಫರೆನ್ಸ್ ಮೂಲಕ ಏಜೆನ್ಸಿಗಳು ಮತ್ತು ಕೃಷಿ ವ್ಯವಹಾರ ಕೇಂದ್ರದ ಅಡಿಯಲ್ಲಿ 75000 ಸಶಕ್ತ ಕೃಷಿ ಪ್ರೇಮಿಗಳೊಂದಿಗೆ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!