ಶೋಭಾ ಕರಂದ್ಲಾಜೆಗೆ ರಾಖಿ ಕಟ್ಟಿದ ಅಂಗಾರ 
ರಾಜ್ಯ

ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಎಫ್ ಪಿ ಒ ಸ್ಥಾಪಿಸಲು ಕೇಂದ್ರ ಸರ್ಕಾರ ಚಿಂತನೆ: ಶೋಭಾ ಕರಂದ್ಲಾಜೆ

ಮುಂದಿನ ದಿನಗಳಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ರೈತ ಉತ್ಪಾದನಾ ಸಂಸ್ಥೆಗಳನ್ನು (ಎಫ್‌ಪಿಒ) ಆರಂಭಿಸಲು ಕೇಂದ್ರ ಸರ್ಕಾರ ಯೋಜಿಸಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಹೇಳಿದ್ದಾರೆ.

ಮಂಗಳೂರು: ಮುಂದಿನ ದಿನಗಳಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ರೈತ ಉತ್ಪಾದನಾ ಸಂಸ್ಥೆಗಳನ್ನು (ಎಫ್‌ಪಿಒ) ಆರಂಭಿಸಲು ಕೇಂದ್ರ ಸರ್ಕಾರ ಯೋಜಿಸಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಹೇಳಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾಗಿ ಭಾನುವಾರ ಅಧಿಕಾರ ಸ್ವೀಕರಿಸಿದ ನಂತರ ಶೋಭಾ ಮೊದಲ ಬಾರಿಗೆ ದಕ್ಷಿಣ ಕನ್ನಡಕ್ಕೆ ಭೇಟಿ ನೀಡಿದರು. ಅವರು ಬಂಟ್ವಾಳದ ಪ್ರವಾಸಿ ಮಂದಿರದಲ್ಲಿ ಶಾಸಕ ರಾಜೇಶ್ ನಾಯ್ಕ್ ಮತ್ತು ಸ್ಥಳೀಯ ನಾಯಕರೊಂದಿಗೆ ಚರ್ಚಿಸಿದರು. 

ಶಾಸಕ ರಾಜೇಶ್ ನಾಯ್ಕ್ ಅವರು ಭಗವದ್ಗೀತೆಯ ಪ್ರತಿಯನ್ನು ನೀಡುವ ಮೂಲಕ ಅಭಿನಂದಿಸಿದರು. ರಕ್ಷಾ ಬಂಧನದ ಸಂದರ್ಭದಲ್ಲಿ ರಾಖಿ ಕಟ್ಟಿದರು. ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕೋಟಿ-ಚೆನ್ನಯ ಪುಸ್ತಕದ ಪ್ರತಿಯನ್ನು ನೀಡಿದರು.

ನಂತರ ಅವರು ಸುಳ್ಯದಲ್ಲಿರುವ ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದರು. ಈ ವೇಳೆ  ಮೀನುಗಾರಿಕೆ ಸಚಿವ ಎಸ್ ಅಂಗಾರ ಹಾಗೂ ತಾಲ್ಲೂಕು ಪಕ್ಷದ ಮುಖಂಡರು ಸಚಿವರನ್ನು ಸನ್ಮಾನಿಸಿದರು. ಶೋಭಾ ಮತ್ತು ಅಂಗಾರ ಕೂಡ ಪರಸ್ಪರ ರಾಖಿ ಕಟ್ಟಿದರು.

ಕಡಬ ತಾಲೂಕಿನಲ್ಲಿರುವ ತಮ್ಮ ಸ್ವಗ್ರಾಮ ಚಾರ್ವಾಕಕ್ಕೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ ಸೋಮವಾರ ಶ್ರೀ ಕಪಿಲೇಶ್ವರ ದೇವಸ್ಥಾನದಲ್ಲಿ ಪೂಜೆಯಲ್ಲಿ ಪಾಲ್ಗೋಳ್ಳಲಿದ್ದಾರೆ. ಸಚಿವೆ ಶೋಭಾ ಅವರು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ, ವೀಡಿಯೊ ಕಾನ್ಫರೆನ್ಸ್ ಮೂಲಕ ಏಜೆನ್ಸಿಗಳು ಮತ್ತು ಕೃಷಿ ವ್ಯವಹಾರ ಕೇಂದ್ರದ ಅಡಿಯಲ್ಲಿ 75000 ಸಶಕ್ತ ಕೃಷಿ ಪ್ರೇಮಿಗಳೊಂದಿಗೆ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT