ಸಚಿವ ಸುಧಾಕರ್'ಗೆ ರಾಖಿ ಕಟ್ಟುತ್ತಿರುವ ವಿದ್ಯಾರ್ಥಿನಿಯರು 
ರಾಜ್ಯ

ಚಿಕ್ಕಬಳ್ಳಾಪುರ: ಶಾಲೆಗೆ ಆಗಮಿಸಿದ ಸಚಿವ ಸುಧಾಕರ್‌ಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

ರಾಜ್ಯದಲ್ಲಿ ಸೋಮವಾರದಿಂದ 9, 10 ಸೇರಿದಂತೆ ಪಿಯು ಕಾಲೇಜುಗಳ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರೌಢ ಶಾಲೆ ಹಾಗೂ ವಾಪಸಂದ್ರ ಪ್ರೌಢ ಶಾಲೆಗಳಿಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಭೇಟಿ ನೀಡಿದರು.

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಸೋಮವಾರದಿಂದ 9, 10 ಸೇರಿದಂತೆ ಪಿಯು ಕಾಲೇಜುಗಳ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರೌಢ ಶಾಲೆ ಹಾಗೂ ವಾಪಸಂದ್ರ ಪ್ರೌಢ ಶಾಲೆಗಳಿಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಭೇಟಿ ನೀಡಿದರು.

ಸಚಿವ ಸುಧಾಕರ್ ಅವರು ಮೊದಲಿಗೆ ನಗರದ ಜೂನಿಯರ್ ಕಾಲೇಜಿನ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದರು, ಈ ವೇಳೆ ವಿದ್ಯಾರ್ಥಿಗಳು ಚಾಕಲೇಟ್, ಗುಲಾಬಿ ಹೂ ಕೊಟ್ಟು ಸ್ವಾಗತ ಕೋರಿದರು.

 ನಂತರ ವಾಪಸಂದ್ರ ಪ್ರೌಢ ಶಾಲೆಗೆ ಭೇಟಿ ನೀಡಿದ ಸಚಿವರು ಅಲ್ಲೂ ವಿದ್ಯಾರ್ಥಿಗಳಿಗೆ ಚಾಕಲೇಟ್, ಹೂ ಕೊಟ್ಟು ಶುಭ ಹಾರೈಸಿದರು. ಇದೇ ವೇಳೆ ವಿದ್ಯಾರ್ಥಿನಿಯರು ಸಚಿವರಿಗೆ ರಾಖಿ ಕಟ್ಟಿ ರಕ್ಷಾ ಬಂಧನದ ಶುಭಾಶಯ ತಿಳಿಸಿದರು.

ಬಳಿಕ ಮಾತನಾಡಿದ ಸುಧಾಕರ್ ಅವರು, ಕೋವಿಡ್ ಬಂದ ನಂತರ ಕಳೆದ ಒಂದೂವರೆ ವರ್ಷದಿಂದ ಶಾಲೆಗಳ ಆರಂಭ ಆಗಿರಲಿಲ್ಲ. ಶಿಕ್ಷಣ ಕ್ಷೇತ್ರಕ್ಕೆ ಅಪಾರ ನಷ್ಟ ಸಂಭವಿಸಿದ್ದು. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಮಂಕಾಗಿತ್ತು. ವಿದ್ಯಾರ್ಥಿಗಳ ಆರೋಗ್ಯದ ಜೊತೆಗೆ ಶೈಕ್ಷಣಿಕ ಬದುಕು ರೂಪಿಸೋದು ಸರ್ಕಾರದ ಬಹುದೊಡ್ಡ ಹೊಣೆಗಾರಿಕೆ, ಜವಾಬ್ದಾರಿ, ಹೀಗಾಗಿ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಜೊತೆ ಶಾಲೆಗಳ ಆರಂಭ ಮಾಡಲಾಗಿದೆ ಎಂದು ಹೇಳಿದರು. 

ಮುಂದಿನ ದಿನಗಳಲ್ಲಿ ತಾಂತ್ರಿಕ ಸಲಹ ಸಮಿತಿ ಜೊತೆ ಚರ್ಚೆ ಮಾಡಿ ಎಲ್ಲಾ ತರಗತಿಗಳ ಪ್ರಾರಂಭದ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿದ್ಯಾರ್ಥಿಗಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಶಾಲೆಗಳಿಗೆ ಭೇಟಿ ನೀಡಲಾಗಿದೆ. ಇದೇ ವೇಳೆ ಇಂದಿನಿಂದ ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗಿದ್ದು. ಇದೊಂದು ಉತ್ತಮ ಶಿಕ್ಷಣ ನೀತಿ. ಈ ನೀತಿ ಜಾರಿಗೆ ಬರುವ ಮುನ್ನ ಚರ್ಚೆಗೆ ಅವಕಾಶ ಇತ್ತು. ಆಗ ಸಿದ್ದರಾಮಯ್ಯ ನವರು ಸಹ ಸಲಹೆ ಗಳನ್ನ ಕೊಡಬಹುದಿತ್ತು. ಆದರೆ ಈಗ ಅಪಸ್ವರ ಅನುಮಾನ ಪಡೋದಯ ಸರಿಯಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT