ಬೆಂಕಿ ಅವಘಡದಲ್ಲಿ ಸುಟ್ಟು ಕರಕಲಾಗಿರುವ ಮೀನುಗಳು 
ರಾಜ್ಯ

ಮಂಗಳೂರು: ವಿಶ್ವ ಹಿಂದೂ ಪರಿಷದ್ ಮುಖಂಡರ ಮೀನು ಮಾರಾಟ ಮಳಿಗೆಗೆ ದುಷ್ಕರ್ಮಿಗಳಿಂದ ಬೆಂಕಿ

ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕೋಮು ಸೌಹಾರ್ದತೆ ಕದಡುವ ಸಲುವಾಗಿ ದುಷ್ಕರ್ಮಿಗಳು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಿದ್ದಾರೆ.

ಮಂಗಳೂರು: ಅಪರಿಚಿತ ದುಷ್ಕರ್ಮಿಗಳು ವಿಶ್ವ ಹಿಂದೂ ಪರಿಷದ್ (ವಿ ಎಚ್ ಪಿ) ಮುಖಂಡರಿಗೆ ಸೇರಿದ ಮೀನು ಮಾರಾಟ ಅಂಗಡಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಉಪ್ಪಿನಂಗಡಿಯ ಹಳೇಗೇಟು ಎಂಬಲ್ಲಿ ಈ ಘಟನೆ 
ನಡೆದಿದೆ. ಭಾನುವಾರ ರಾತ್ರಿ ಬೆಂಕಿ ಹಚ್ಚಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.

ರಾಜ್ಯ ಹೆದ್ದಾರಿಯ ಸಮೀಪದಲ್ಲಿ ಈ ಅಂಗಡಿ ಇತ್ತು. ಅಂಗಡಿ ಮಾಲೀಕ ಅಶೋಕ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಅಂಗಡಿಯಲ್ಲಿ ಮೀನು ಮತ್ತು ಮಂಜುಗಡ್ಡೆ ಇಡಲಾಗಿತ್ತು ಎಂದಿದ್ದಾರೆ. 

ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕೋಮು ಸೌಹಾರ್ದತೆ ಕದಡುವ ಸಲುವಾಗಿ ದುಷ್ಕರ್ಮಿಗಳು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಿದ್ದಾರೆ. ಪುತ್ತೂರು ಶಾಸಕರು ಕೂಡಾ ಸ್ಥಳಕ್ಕೆ ಆಗಮಿಸಿದ್ದು, ಶೀಘ್ರವಾಗಿ ದುಷ್ಕರ್ಮಿಗಳನ್ನು ಪತ್ತೆ ಹಚ್ಚುವಂತೆ ಪುತ್ತೂರು ಡಿ ವೈ ಎಸ್ ಪಿ ಅವರಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT