ಕಾರು ವಶಕ್ಕೆ ಪದದ ಅಧಿಕಾರಿಗಳು 
ರಾಜ್ಯ

ಯುಬಿ ಸಿಟಿ ಬಳಿ ಆರ್'ಟಿಒ ಅಧಿಕಾರಿಗಳ ದಿಢೀರ್ ಕಾರ್ಯಾಚರಣೆ: 15 ಐಷಾರಾಮಿ ಕಾರುಗಳು ವಶಕ್ಕೆ

ಆರ್ ಟಿ ಒ ಅಧಿಕಾರಿಗಳು ಸೋಮವಾರ ಬೆಂಗಳೂರಿನ ಯುಬಿ ಸಿಟಿ ಬಳಿ ದಿಢೀರ್ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ 15 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

ಬೆಂಗಳೂರು: ಆರ್ ಟಿ ಒ ಅಧಿಕಾರಿಗಳು ಸೋಮವಾರ ಬೆಂಗಳೂರಿನ ಯುಬಿ ಸಿಟಿ ಬಳಿ ದಿಢೀರ್ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ 15 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. 

ಬಾಲಿವುಡ್ ನ ಹಿರಿಯ ನಟ ಅಮಿತಾಬ್ ಬಚ್ಚನ್ ಅವರ ಹೆಸರಿನಲ್ಲಿರುವ ರೋಲ್ಸ್ ರಾಯ್ ಕಾರು, ಪರಿಷತ್ ಸದಸ್ಯ ಫಾರೂಕ್ ಅವರಿಗೆ ಸೇರಿದ ಎರಡು ಐಷಾರಾಮಿ ಕಾರುಗಳನ್ನು ವಶಕ್ಕೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆಂದು ವರದಿಗಳು ತಿಳಿಸಿವೆ.

ಇನ್ಶುರೆನ್ಸ್ ಇಲ್ಲದ, ಸೂಕ್ತ ದಾಖಲೆ ಇಲ್ಲದ, ಬೇರೆ ಬೇರೆ ರಾಜ್ಯಗಳಲ್ಲಿ ನೋಂದಣಿ ಮಾಡಿ, ಒಂದೇ ನಂಬರ್ ನಲ್ಲಿ ಬೇರೆ ಬೇರೆ ಕಾರುಗಳು ಓಡಾಟ ಮಾಡುತ್ತಿರುವುದನ್ನು ಕಾರ್ಯಾಚರಣೆ ವೇಳೆ ಆರ್‌ಟಿಒ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸದ್ಯ ಕಾರ್ಯಾಚರಣೆ ಮುಂದುವರಿದಿದ್ದು 15 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. 

ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್‌ ನೇತೃತ್ವದಲ್ಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ರಾಜಣ್ಣ, ಮೋಟಾರ್‌ ವಾಹನ ನಿರೀಕ್ಷಕರಾದ ಸುಧಾಕರ್‌, ತಿಪ್ಪೇಸ್ವಾಮಿ, ವಿಶ್ವನಾಥ ಶೆಟ್ಟರ್‌, ರಂಜಿತ್‌, ರಾಜೇಶ್‌ ಮತ್ತು ರಾಜ್‌ ಕುಮಾರ್‌ ಅವರನ್ನ ಒಳಗೊಂಡ ತಂಡ ಇಂದು ಕಾರ್ಯಾಚರಣೆ ನಡೆಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT