ಕಿದ್ವಾಯಿ ಗಂಥಿ ಸಂಸ್ಥೆಯಲ್ಲಿ ಇನ್ಫೋಸಿಸ್ ವತಿಯಿಂದ ನಿರ್ಮಿಸಿರುವ ಒಪಿಡಿ ಬ್ಲಾಕ್ ನ್ನು ಸಿಎಂ ಬೊಮ್ಮಾಯಿ ಹಾಗೂ ಸುಧಾಕರ್ ಅವರು ಉದ್ಘಾಟನೆ ಮಾಡಿದರು. 
ರಾಜ್ಯ

ಕಿದ್ವಾಯಿ ಆಸ್ಪತ್ರೆಯಲ್ಲಿ ಒಪಿಡಿ ತೆರೆದ ಇನ್ಫೋಸಿಸ್ ಫೌಂಡೇಷನ್

ಕಿದ್ವಾಯಿ ಗಂಥಿ ಸಂಸ್ಥೆಯಲ್ಲಿ ಇನ್ಫೋಸಿಸ್ ವತಿಯಿಂದ ನಿರ್ಮಿಸಿರುವ ಒಪಿಡಿ ಬ್ಲಾಕ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವೋ ಸುಧಾಕರ್ ಅವರು ಸೋಮವಾರ ಉದ್ಘಾಟನೆ ಮಾಡಿದರು. 

ಬೆಂಗಳೂರು: ಕಿದ್ವಾಯಿ ಗಂಥಿ ಸಂಸ್ಥೆಯಲ್ಲಿ ಇನ್ಫೋಸಿಸ್ ವತಿಯಿಂದ ನಿರ್ಮಿಸಿರುವ ಒಪಿಡಿ ಬ್ಲಾಕ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವೋ ಸುಧಾಕರ್ ಅವರು ಸೋಮವಾರ ಉದ್ಘಾಟನೆ ಮಾಡಿದರು. 

ಇನ್ಫೋಸಿಸ್‌ ನ ಸಿಎಸ್‌ಆರ್‌ ವಿಭಾಗ ಮತ್ತು ಲೋಕೋಪಕಾರಿ ಸಂಸ್ಥೆ ಬೆಂಗಳೂರಿನ ಕಿದ್ವಾಯಿ ಮೆಮೋರಿಯಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಆಂಕೋಲಜಿಯಲ್ಲಿನ 75,000 ಚದರ ಅಡಿ ವಿಸ್ತೀರ್ಣದ ಬಹು-ಶಿಸ್ತಿನ ಹೊರರೋಗಿ (ಒಪಿಡಿ) ಬ್ಲಾಕ್‌ನ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿದೆ. 

ಈ ಹೊಸ ಒಪಿಡಿ ಬ್ಲಾಕ್‌ಗೆ ಇನ್ಫೋಸಿಸ್‌ ಫೌಂಡೇಷನ್ 25.5 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಇದು 12ಕ್ಕೂ ಹೆಚ್ಚು ಇಲಾಖೆಗಳ ವ್ಯಾಪ್ತಿ ಹೊಂದಿದ್ದು, ಪ್ರತಿನಿತ್ಯ 1,800 ರೋಗಿಗಳಿಗೆ ಸ್ಥಳಾವಕಾಶ ಒದಗಿಸುವ ಗುರಿ ಹೊಂದಿದೆ.

ಉದ್ಘಾಟನೆ ವೇಳೆ ಮಾತನಾಡಿರುವ ಸುಧಾಮೂರ್ತಿ ಅವರು, ''ಸೂಕ್ತ ಚಿಕಿತ್ಸೆ ಮತ್ತು ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದ ರೋಗಿಗಳು ಹಾಗೂ ಅವರ ಕುಟುಂಬ ಸದಸ್ಯರು ಹಲವು ಬಾರಿ ದುರದೃಷ್ಟಕರ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ. ಇಂತಹ ಸಂಕಷ್ಟದಲ್ಲಿರುವ ಜನರಿಗೆ, ವಿಶೇಷವಾಗಿ ನಾವೆಲ್ಲರೂ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಸಿಲುಕಿರುವ ಸಂದರ್ಭದಲ್ಲಿ, ಜನರಿಗೆ ಸ್ವಚ್ಛ ಹಾಗೂ ಸಮಯಕ್ಕೆ ಸರಿಯಾದ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಇದು ಫೌಂಡೇಷನ್‌ನ ಒಂದು ಸಣ್ಣ ಪ್ರಯತ್ನವಾಗಿದೆ. 

ಈ ಉಪಕ್ರಮದ ಸಹಭಾಗಿತ್ವ ಹಾಗೂ ಬೆಂಬಲಕ್ಕೆ ನಾವು, ರಾಜ್ಯ ಸರ್ಕಾರ, ಗೌರವಾನ್ವಿತ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಮತ್ತು ಕಿದ್ವಾಯಿ ಗ್ರಂಥಿ ಸ್ಮಾರಕ ಸಂಸ್ಥೆಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT