ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಸಚಿವ ಗೋವಿಂದ ಕಾರಜೋಳ 
ರಾಜ್ಯ

ಜಲ ಸಂಪನ್ಮೂಲ ಯೋಜನೆಗಳ ಅನುಷ್ಠಾನಕ್ಕೆ ಭೂ ಸ್ವಾಧೀನ ಪ್ರಕ್ರಿಯೆಗೆ ಆದ್ಯತೆ ನೀಡಿ: ಗೋವಿಂದ ಕಾರಜೋಳ ಸೂಚನೆ

ಜಲ ಸಂಪನ್ಮೂಲ ಇಲಾಖೆಯ ಯೋಜನೆಗಳ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಭೂ ಸ್ವಾಧೀನ ಪ್ರಕ್ರಿಯೆಗಳಿಗೆ ಆದ್ಯತೆ ನೀಡಬೇಕೆಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳ ಅವರು ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು: ಜಲ ಸಂಪನ್ಮೂಲ ಇಲಾಖೆಯ ಯೋಜನೆಗಳ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಭೂ ಸ್ವಾಧೀನ ಪ್ರಕ್ರಿಯೆಗಳಿಗೆ ಆದ್ಯತೆ ನೀಡಬೇಕೆಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳ ಅವರು ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯ ನೀರಾವರಿ ನಿಗಮದಲ್ಲಿ ಇಂದು ನಡೆದ  ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,  ಕೃಷ್ಣಾ ಭಾಗ್ಯ ಜಲ ನಿಗಮ, ಕರ್ನಾಟಕ ನೀರಾವರಿ ನಿಗಮ ಮತ್ತು ವಿಶ್ವೇಶ್ವರಯ್ಯ ಜಲ ನಿಗಮಗಳ ಅಡಿಯಲ್ಲಿ ಅನುಷ್ಟಾನಗೊಳಿಸುತ್ತಿರುವ ಪ್ರಮುಖ ಯೋಜನೆಗಳಾದ  ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತ, ಭದ್ರಾ ಮೇಲ್ದಂಡೆ ಯೋಜನೆ, ಎತ್ತಿನ ಹೊಳೆ ಕುಡಿಯುವ ನೀರಿನ ಯೋಜನೆ, ಮಹಾದಾಯಿ, ಕಳಸಾ ಮತ್ತು ಬಂಡೂರು ನಾಲಾ ತಿರುವ ಯೋಜನೆ, ನವಲಿ ಸಮತೋಲನಾ ಜಲಾಶಯ ನಿರ್ಮಾಣ ಯೋಜನಾ ಕಾಮಗಾರಿಗಳ  ಪ್ರಸ್ತುತ ಹಂತದ ಭೌತಿಕ ಮತ್ತು ಆರ್ಥಿಕ ಪ್ರಗತಿಯ ವಿವರಗಳನ್ನು ಚರ್ಚಿಸಿದರು.

ಮೇಕೆದಾಟು ಯೋಜನೆಯ ಪ್ರಸ್ತುತ ಹಂತದ ವಿವರಗಳು ಹಾಗೂ ಕಾನೂನಾತ್ಮಕ ಕ್ರಮಗಳ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು. ಯೋಜನೆಗಳ ಅನುಷ್ಠಾನದಲ್ಲಿ ಭೂ ಸ್ವಾಧೀನ ಪ್ರಕ್ರಿಯೆಗಳಿಗೆ ಆದ್ಯತೆ ನೀಡಿ, ಈ ನಿಟ್ಟಿನಲ್ಲಿ ಅಗತ್ಯ ಪರಿಹಾರ  ನೀಡಲು ನಿಗಮಗಳಡಿ Corpus fund ಸ್ಥಾಪಿಸುವ ಬಗ್ಗೆ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದರು. ಭೂ ಸ್ವಾಧೀನ ಪ್ರಕ್ರಿಯೆಯನ್ನು ತೀವ್ರಗತಿಯಲ್ಲಿ ಜರುಗಿಸಲು ಪ್ರಮುಖವಾಗಿ ವಿಶೇಷ ಭೂ ಸ್ವಾಧೀನಾಧಿಕಾರಿಗಳು ಮತ್ತಿತರೆ ಸಂಬಂಧಿತ ಅನೇಕ ಅಧಿಕಾರಿ ವೃಂದದ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತಾಗಿ ಸರ್ಕಾರದ ಅನುಮೋದನೆಗಾಗಿ ಪ್ರತ್ಯೇಕ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದರು.

ಇನ್ನು ಮುಂದೆ ಸೂಕ್ಷ್ಮ ನೀರಾವರಿ ಯೋಜನೆಗಳ ಬದಲಾಗಿ ಫಲಾನುಭವಿ ರೈತರ/ ಸಮೂಹ ರೈತರ ಜಮೀನುಗಳಡಿ ನೀರಿನ ಸಂಗ್ರಹಣ ತೊಟ್ಟಿಗಳನ್ನು ನಿರ್ಮಿಸಿ ನೀರು ಒದಗಿಸುವುದು ಮತ್ತು ಸದರಿ ಸಂಗ್ರಹಣೆಯಿಂದ ರೈತರು ತಮ್ಮ ಸ್ವಂತ ಪೈಪ್ ಲೈನ್ ಅಳವಡಿಕೆಗಳಿಂದ ನೀರಾವರಿಗೆ ನೀರನ್ನು ಬಳಸಲು ಅವಕಾಶಗಳನ್ನು ಕಲ್ಪಿಸುವ ಕುರಿತು ಅಥವಾ ಫಲಾನುಭವಿ ರೈತರ ಸರ್ವೆ ನಂಬರ್ ಗಳಿಗೆ ಸೂಕ್ತ ಓಟ್ ಲೆಟ್ ಗಳನ್ನು ನಿರ್ಮಿಸುವುದು ಮತ್ತು ಅಲ್ಲಿಂದ ರೈತರು ತಮ್ಮ ಹೊಲಗಳಿಗೆ ನೀರನ್ನು ಪಡೆಯುವ ವ್ಯವಸ್ಥೆ ಕುರಿತು ಪರಿಶೀಲಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದರು. ಕೆರೆ ತುಂಬಿಸುವ ಯೋಜನೆಗಳು ಮತ್ತು ಏತ ನೀರಾವರಿ ಯೋಜನೆಗಳ ಸಫಲತೆ ಕುರಿತಾಗಿ ಯೋಜನೆಗಳ ಮೌಲ್ಯಮಾಪನ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವರು ಆದೇಶಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ