ಡಿ ಆರ್ ಎಂ ಶ್ಯಾಂ ಸಿಂಗ್ ಅವರಿಂದ ಗೌರವ ಸ್ವೀಕರಿಸುತ್ತಿರುವ ರೈಲ್ವೇ ಸಿಬ್ಬಂದಿ ಕಾವಡಿ ಮಂಜಪ್ಪ 
ರಾಜ್ಯ

ಬಾಲಕನ ಜೀವ ಉಳಿಸಿದ ಕಾರ್ಮಿಕನಿಗೆ ರೈಲ್ವೇ ಇಲಾಖೆ ಗೌರವ

ಬಾಲಕ ಸಮುದ್ರವಳ್ಳಿ ಮಾರ್ಗದಲ್ಲಿ ಬಿದ್ದುಬಿಟ್ಟಿದ್ದ. ಬಾಲಕ ಬಿದ್ದುದನ್ನು ಆ ಕತ್ತಲಿನಲ್ಲೂ ರೈಲ್ವೇ ಸಿಬ್ಬಂದಿ ಕಾವಡಿ ಮಂಜಪ್ಪ ಒಡನೆಯೇ ಗಮನಿಸಿದ್ದರು. ತಲೆಗೆ ಪೆಟ್ಟಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಬಾಲಕನನ್ನು ಕೂಡಲೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.

ಬೆಂಗಳೂರು: ಬೆಂಗಳೂರು ರೈಲ್ವೇ ವಿಭಾಗದ ವ್ಯವಸ್ಥಾಪಕ ಶ್ಯಾಂ ಸಿಂಗ್ ಅವರು ಬಾಲಕನ ಜೀವ ರಕ್ಷಿಸಿದ ರೈಲ್ವೇ ಸಿಬ್ಬಂದಿ ಕಾವಡಿ ಮಂಜಪ್ಪ ಅವರನ್ನು ಗೌರವಿಸಿದ್ದಾರೆ. ಈ ಸಂದರ್ಭ ಹಿರಿಯ ರೈಲ್ವೇ ಎಂಜಿನಿಯರ್ ಅಲೋಕ್ ರಂಜನ್ ದಾಸ್ ಕೂಡಾ ಉಪಸ್ಥಿತರಿದ್ದರು. 

ಹಾಸನ- ಯಶವಂತಪುರ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕ ಮಾರ್ಗ ಮಧ್ಯ ಮುಂಜಾನೆ 3ರ ವೇಳೆಗೆ ರೈಲಿನಿಂದ ಬಿದ್ದುಬಿಟ್ಟಿದ್ದ. ಬಾಲಕನ ಹೆತ್ತವರಿಗೆ ಈ ವಿಷಯ ತಡವಾಗಿ ತಿಳಿದುಬಂದಿತ್ತು. ನಂತರ ರೈಲನ್ನು ನಿಲ್ಲಿಸಲಾಗಿತ್ತು. 

ಬಾಲಕ ಸಮುದ್ರವಳ್ಳಿ ಮಾರ್ಗದಲ್ಲಿ ಬಿದ್ದುಬಿಟ್ಟಿದ್ದ. ಬಾಲಕ ಬಿದ್ದುದನ್ನು ಆ ಕತ್ತಲಿನಲ್ಲೂ ರೈಲ್ವೇ ಸಿಬ್ಬಂದಿ ಕಾವಡಿ ಮಂಜಪ್ಪ ಒಡನೆಯೇ ಗಮನಿಸಿದ್ದರು. ತಲೆಗೆ ಪೆಟ್ಟಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಬಾಲಕನನ್ನು ಕೂಡಲೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲದೆ ಸ್ಟೇಷನ್ ಮಾಸ್ಟರ್ ಗೆ ಈ ಸುದ್ದಿ ಮುಟ್ಟಿಸಿದ್ದರು. 

ಹೆತ್ತವರು ತಮ್ಮ ಮಗನಿಗಾಗಿ ಹುಡುಕಾಟ ನಡೆಸುವಷ್ಟರ ವೇಳೆಗೆ ಅವರು ಬಾಲಕ ಬಿದ್ದಿದ್ದ ಸ್ಥಳದಿಂದ 100 ಕಿ.ಮೀ ದೂರ ಬಂದುಬಿಟ್ಟಿದ್ದರು. ಬಾಲಕ ಕಾಣೆಯಾಗಿರುವ ಕುರಿತು ರೈಲು ನಿಲ್ದಾಣದ ಅಧಿಕಾರಿಗಳಲ್ಲಿ ವಿಚಾರಿಸಿದಾಗ ಪಾಲಕರಿಗೆ ತಮ್ಮ ಮಗ ಸಮುದ್ರವಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಗತಿ ತಿಳಿದು ನಿರಾಳರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT