ಸಂಗ್ರಹ ಚಿತ್ರ 
ರಾಜ್ಯ

ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ: ಕಾರ್ಯಕ್ರಮ ಪುನರಾರಂಭಕ್ಕೆ ಸರ್ಕಾರ ಚಿಂತನೆ

ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪುನರಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು: ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪುನರಾರಂಭಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 

2021ರ ಫೆಬ್ರವರಿ ತಿಂಗಳಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎಂಬ ಕಾರ್ಯಕ್ರಮವನ್ನು ಆರಂಭಿಸಿದ್ದರು. ಕಾರ್ಯಕ್ರಮದಂತೆ ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳು ಗ್ರಾಮಗಳಲ್ಲಿ ವಾಸ್ತವ್ಯ ಹೂಡಿ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ನಿಂತು ಬಗೆಹರಿಸಬೇಕೆಂದು ಸೂಚಿಸಲಾಗಿತ್ತು. 

ಕಾರ್ಯಕ್ರಮದಂತೆ ಫೆಬ್ರವರಿ ತಿಂಗಳಿನಲ್ಲಿ ದೊಡ್ಡಬಳ್ಳಾಪುರದಲ್ಲಿ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಉಳಿದುಕೊಂಡ ಸಚಿವ ಅಶೋಕ್ ಅವರು ಈ ವೇಳೆ 227 ಗ್ರಾಮಗಳಿಗೆ ಭೇಟಿ ನೀಡಿ, ಜನರ ಸಂಕಷ್ಟಗಳನ್ನು ಆಲಿಸಿದ್ದರು. ಬಳಿಕ ಸಮಸ್ಯೆಗಳನ್ನು ಬಗೆಹರಿಸಿದ್ದರು. 

ಮಾರ್ಚ್ ತಿಂಗಳಿನಲ್ಲಿ ಹುಬ್ಬಳ್ಳಿಯ ಗ್ರಾಮಗಳಲ್ಲಿ ವಾಸ್ತವ್ಯ ಹೂಡಿದ್ದರು. ಈ ಕಾರ್ಯಕ್ರಮ ಸಾಕಷ್ಟು ಮೆಚ್ಚುಗೆಗಳೂ ವ್ಯಕ್ತವಾಗಿದ್ದವು. ಬಳಿಕ ಸಾಕಷ್ಟು ಶಾಸಕರೂ ಕಾರ್ಯಕ್ರಮದೊಂದಿಗೆ ಕೈಜೋಡಿಸಲು ಆರಂಭಿಸಿತ್ತು. ಆದರೆ, ಕೋವಿಡ್ ಸಾಂಕ್ರಾಮಿಕ ರೋಗ ಹಾಗೂ ಲಾಕ್ಡೌನ್ ನಿಂದಾಗಿ ಕಾರ್ಯಕ್ರಮ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುವಂತೆ ಆಗಿತ್ತು. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಶೋಕ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತಲೂ ಕಡಿಮೆ ಇರುವ  ಜಿಲ್ಲೆಗಳಲ್ಲಿ ಭೌತಿಕ ತರಗತಿಗಳ ಆರಂಭ ಮಾಡಿದ್ದಾರೆ. ಹೀಗಾಗಿ ಕಾರ್ಯಕ್ರಮವನ್ನು ಕೂಡ ಪುನರಾರಂಭ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT