ಡಾ. ಕೆ. ಸುಧಾಕರ್ 
ರಾಜ್ಯ

ಕೊರೋನಾ ಪರೀಕ್ಷೆ ನಿರ್ವಹಣೆಗೆ ಹೊಸ ವ್ಯವಸ್ಥೆ: ಡಾ. ಕೆ. ಸುಧಾಕರ್

ಕೊರೋನ  ಸಂಭವನೀಯ ಮೂರನೇ ಅಲೆಯನ್ನು ತಡೆಗಟ್ಟುವ ಸಲುವಾಗಿ ಪರೀಕ್ಷೆ ನಿರ್ವಹಣೆಗೆ ನೂತನ ವ್ಯವಸ್ಥೆ ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. 

ಬೆಂಗಳೂರು: ಕೊರೋನ  ಸಂಭವನೀಯ ಮೂರನೇ ಅಲೆಯನ್ನು ತಡೆಗಟ್ಟುವ ಸಲುವಾಗಿ ಪರೀಕ್ಷೆ ನಿರ್ವಹಣೆಗೆ ನೂತನ ವ್ಯವಸ್ಥೆ ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಜಿಲ್ಲಾವಾರು ಪರೀಕ್ಷೆಗಳನ್ನು 1.75 ಲಕ್ಷಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಒಟ್ಟು ಪರೀಕ್ಷೆಗಳಲ್ಲಿ ಶೇಕಡಾ  10 ರಷ್ಟು ಪರೀಕ್ಷೆಗಳನ್ನು ಕಡ್ಡಾಯವಾಗಿ 18 ವರ್ಷ ಕೆಳಗಿನ ಮಕ್ಕಳಿಗೆ ಮಾಡುವಂತೆಯೇ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯ ಸಿಬ್ಬಂದಿಗಳಿಗೆ  ಸ್ಪಷ್ಟವಾಗಿ ಸೂಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹರಡುವಿಕೆ ಮೇಲೆ ನಿಗಾ ವಹಿಸಲು ಒಟ್ಟಾರೇ ಪರೀಕ್ಷೆಗಳಲ್ಲಿ ಶೇಕಡಾ 50 ರಷ್ಟು ಪರೀಕ್ಷೆಗಳನ್ನು ತಾಲೂಕ್ ಕೇಂದ್ರ ಪ್ರದೇಶದ ಹೊರಗಡೆ ನಡೆಸಲು ಸೂಚಿಸಲಾಗಿದೆ. ಪಾಸಿಟಿವಿಟಿ ದರ ಶೇಕಡಾ 5ಕ್ಕಿಂತ ಕಡಿಮೆ ಇರುವ ಗ್ರಾಮ ಪಂಚಾಯಿತಿ, ಪಟ್ಟಣ ಪ್ರದೇಶಗಳಲ್ಲಿ ರೋಗ ಲಕ್ಷಣ ರಹಿತ ಪ್ರಕರಣಗಳನ್ನು ಪೂಲಿಂಗ್ ಮೂಲಕ ಪರೀಕ್ಷೆಗೊಳಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT