ನಟ ಕೋಮಲ್ ವಿರುದ್ಧ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸುತ್ತಿರುವುದು 
ರಾಜ್ಯ

ಶಾಲಾ ಮಕ್ಕಳಿಗೆ ಸ್ವೆಟರ್ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ: ನಟ ಕೋಮಲ್ ವಿರುದ್ಧ ದಲಿತ ಸಂಘರ್ಷ ಸಮಿತಿ ಆರೋಪ

ನಟ ಕೋಮಲ್ ಅವರು ಶಾಲಾ ಮಕ್ಕಳ ಸ್ವೆಟರ್ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿದೆ. 

ಬೆಂಗಳೂರು: ನಟ ಕೋಮಲ್ ಅವರು ಶಾಲಾ ಮಕ್ಕಳ ಸ್ವೆಟರ್ ಹಂಚಿಕೆ ವಿಚಾರದಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿದೆ. 

ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ನಟ ಕೋಮಲ್ ವಿರುದ್ಧ ಆರೋಪ ಮಾಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ನಗರದಲ್ಲಿ ನಿನ್ನೆ ಬಿಬಿಎಂಪಿ ಕಚೇರಿ ಮುಂಭಾಗ ಸಮಿತಿ ಅಧ್ಯಕ್ಷ ಡಾ.ಸಿ.ಎಸ್.ರಘು ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸ್ವೆಟರ್‍ಗಳನ್ನು ಮಾರಾಟ ಮಾಡಿ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿರುವ ಸಿಎಸ್ ರಘು ಅವರು, ಪಾಲಿಕೆ ಶಾಲಾ, ಕಾಲೇಜುಗಳಲ್ಲಿ ದಲಿತ, ಹಿಂದುಳಿದ ಮತ್ತು ಕಡು ಬಡವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುತ್ತಿದ್ದಾರೆ. 2020-21ನೆ ಸಾಲಿನಲ್ಲಿ ಪಾಲಿಕೆ ಮಕ್ಕಳಿಗೆ ಸ್ವೆಟರ್‍ಗಳನ್ನು ನೀಡಲು ಅನುದಾನ ಮೀಸಲು ಇಟ್ಟಿರುತ್ತಾರೆ. ಆದರೆ, ಪಾಲಿಕೆಯ ಕೆಲ ಅಧಿಕಾರಿಗಳು ಟೆಂಡರ್ ಕರೆಯದೇ 4ಜಿ ವಿನಾಯಿತಿ ಪಡೆದು ಕರ್ನಾಟಕ ಕೈಮಗ್ಗ ನಿಗಮಕ್ಕೆ ಸ್ವೆಟರ್‍ಗಳನ್ನು ಸರಬರಾಜು ಮಾಡಲು ಆದೇಶ ನೀಡಿದ್ದಾರೆ. 

ಕಳೆದ ಸಾಲಿನಲ್ಲಿ ಕೊರೋನ ಸಾಂಕ್ರಮಿಕ ರೋಗದ ಕಾರಣದಿಂದ ಶಾಲಾ, ಕಾಲೇಜು ಬಂದ್ ಮಾಡಲಾಗಿತ್ತು. ಆದರೆ, ಸ್ವೆಟರ್‍ಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು 1.76 ಕೋಟಿ ರೂ.ಹಣವನ್ನು ಪಾವತಿ ಮಾಡಲಾಗಿದೆ. ಅಂದಾಜು 16 ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಸ್ವೆಟರ್‍ಗಳನ್ನು ವಿತರಣೆ ಮಾಡದೇ ಈ ಯೋಜನೆಯಲ್ಲಿ ಪಾಲಿಕೆ ಅಧಿಕಾರಿಗಳು ಹಣವನ್ನು ಲೂಟಿ ಮಾಡಿದ್ದಾರೆಂದು ಆರೋಪಿಸಿದರು.

ಶ್ರೀಮಂತರ ಮಕ್ಕಳಂತೆ ನಮ್ಮ ಪಾಲಿಕೆ ಶಾಲಾ, ಕಾಲೇಜು ಮಕ್ಕಳು ಮಳೆ, ಚಳಿಯಿಂದ ರಕ್ಷಣೆ ಪಡೆಯಬೇಕು ಮತ್ತು ಶಿಸ್ತುನಿಂದ ಕಾಣಬೇಕು ಎಂದು ಸೈಟರ್‍ಗಳ ಯೋಜನೆ ಆದರೆ ಅಧಿಕಾರಿಗಳ ಧನದಾಹದಿಂದ ಯೋಜನೆ ಹಳ್ಳ ಹಿಡಿದಿದೆ. ಸ್ವೆಟರ್ ಖರೀದಿ ಯೋಜನೆಯಲ್ಲಿ ಭ್ರಷ್ಟಾಚಾರವೆಸಗಿದ ಅಧಿಕಾರಿಗಳನ್ನು ಅಮಾನತು ಮಾಡಲು ತಮಟೆ ಚಳುವಳಿ ಹಾಗೂ ಸ್ವೆಟರ್ ಖರೀದಿ ಅವ್ಯವಹಾರದ ಸೂಕ್ತ ತನಿಖೆ ಮಾಡಲು ಸ್ವೆಟರ್‍ಗಳ ಮಾರಾಟ ಮಾಡಿ ಬಂದ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಮರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!