ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ನಾಲೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ಜಲಸಮಾಧಿ

ಮಂದಗೆರೆ ಎಡದಂಡೆ ನಾಲೆಯಲ್ಲಿ ಈಜಲು ಹೋಗಿ ಮೂವರು ಯುವಕರು ಜಲಸಮಾಧಿಯಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದಲ್ಲಿ ನಡೆದಿದೆ.

ಮಂಡ್ಯ: ಮಂದಗೆರೆ ಎಡದಂಡೆ ನಾಲೆಯಲ್ಲಿ ಈಜಲು ಹೋಗಿ ಮೂವರು ಯುವಕರು ಜಲಸಮಾಧಿಯಾಗಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದಲ್ಲಿ ನಡೆದಿದೆ.

ಮಂಡ್ಯದ ಶ್ರೀ ಚಂದಗೋಳಮ್ಮನವರ ಕ್ಷೇತ್ರಕ್ಕೆ ಪರುವಿಗೆ ಬಂದಿದ್ದ 8 ಯುವಕರ ಪೈಕಿ ಮೂವರು ಯುವಕರು ನಾಲೆಗೆ ಈಜಲು ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.‌‌  ಮೈಸೂರಿನ ಕುಂಬಾರಕೊಪ್ಪಲಿನ ಸಿದ್ಧರಾಜು ಅವರ ಪುತ್ರ ಮಂಜು(20), ಆಟೋ ಚಾಲಕ ಮೊಗರಹಳ್ಳಿ ಮಂಟಿಯ ನಿವಾಸಿ ರವಿ(27) ಮತ್ತು ಲೋಕನಾಯಕ ನಗರದ ರವಿ(22) ನಾಟನಹಳ್ಳಿ ಸಮೀಪದ ಮಂದಗೆರೆ ಎಡದಂಡೆ ನಾಲೆಯ ನೀರಿನಲ್ಲಿ ಮುಳುಗಿದ ದುರ್ದೈವಿಗಳು.

ಕೆ.ಆರ್.ಪೇಟೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಠಾಣಾಧಿಕಾರಿ ಶಿವಣ್ಣ ಅವರ ನೇತೃತ್ವದಲ್ಲಿ ಸತತವಾದ ಕಾರ್ಯಾಚರಣೆ ನಡೆಸಿದರೂ ಕತ್ತಲಾದ ಹಿನ್ನೆಲೆಯಲ್ಲಿ ಮೃತ ಯುವಕರ ದೇಹಗಳನ್ನು ಪತ್ತೆ ಮಾಡಲು ಸಾಧ್ಯವಾಗಲಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT