ಸ್ಥಳದಲ್ಲಿ ಪೊಲೀಸರು 
ರಾಜ್ಯ

ಚಿಕ್ಕಮಗಳೂರು: ಕಾರು ಸಮೇತ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ

ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಕುಟುಂಬಸ್ಥರಿಗೆ ವಾಯ್ಸ್ ಮೆಸೇಜ್ ಮಾಡಿ ಕಾರು ಸಮೇತ ಭದ್ರಾ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ...

ಚಿಕ್ಕಮಗಳೂರು: ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಕುಟುಂಬಸ್ಥರಿಗೆ ವಾಯ್ಸ್ ಮೆಸೇಜ್ ಮಾಡಿ ಕಾರು ಸಮೇತ ಭದ್ರಾ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಬಳಿ ಗುರುವಾರ ನಡೆದಿದೆ.

ಘಟನೆಯಲ್ಲಿ ತಾಯಿ ನೀತು(35) ಹಾಗೂ ಮಗ ಧ್ಯಾನ್(13 ) ಇಬ್ಬರನ್ನು ರಕ್ಷಿಸಲಾಗಿದೆ. ನೀತು ಪತಿ ಮಂಜು, ಅತ್ತೆ ಸುನಂದಮ್ಮ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ.

ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳ ಹಾಗೂ ತರೀಕೆರೆ ಪೊಲೀಸರು ನೀರಲ್ಲಿ ಮುಳುಗಿರುವ ಇಬ್ಬರ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದವರನ್ನು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹಳೇಜೇಡಿಕಟ್ಟೆ ಗ್ರಾಮದವರು ಎಂದು ಗುರುತಿಸಲಾಗಿದೆ. ಮೂಲತಃ ಭದ್ರಾವತಿ ತಾಲೂಕಿನ ಹಳೇ ಜೇಡಿಕಟ್ಟೆ ಮೂಲದ ನೀತು ಎಂಬವರನ್ನು ಬೆಂಗಳೂರಿಗೆ ಮದುವೆ ಮಾಡಿಕೊಟ್ಟಿದ್ದರು. ದಂಪತಿಗೆ 13 ವರ್ಷ ಪ್ರಾಯದ ಧ್ಯಾನ್ ಎಂಬ ಮಗನಿದ್ದಾರೆ.

ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ಮಂಜು, ನೀತು, ಧ್ಯಾನ್ ಹಾಗೂ ಮಂಜು ತಾಯಿ ಸುನಂದಮ್ಮ ನಾಲ್ವರು ಸ್ವಿಫ್ಟ್ ಕಾರಿನಲ್ಲಿ ಬಂದು ಭದ್ರಾ ನಾಲೆಗೆ ಕಾರಿನ ಸಮೇತ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಎಸ್​ಪಿ ಅಕ್ಷಯ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT