ಅಫ್ಘಾನಿಸ್ತಾನದಿಂದ ಬಂದವರ ಜೊತೆಗೆ ಮಾತನಾಡುತ್ತಿರುವ ಪೊಲೀಸ್ ಆಯುಕ್ತ ಶಶಿಕುಮಾರ್ 
ರಾಜ್ಯ

ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದ ಏಳು ಮಂದಿ ಸುರಕ್ಷಿತವಾಗಿ ಮಂಗಳೂರಿಗೆ ವಾಪಸ್ 

ಅಫ್ಘಾನಿಸ್ತಾನದಲ್ಲಿ ನ್ಯಾಟೋ ಮಿಲಿಟರಿ ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಏಳು ಮಂದಿ ಮಂಗಳೂರಿಗರು ಸುರಕ್ಷಿತವಾಗಿ ತಮ್ಮ ಮನೆಗೆ ಹಿಂದಿರುಗಿದ್ದಾರೆ.

ಮಂಗಳೂರು: ಅಫ್ಘಾನಿಸ್ತಾನದಲ್ಲಿ ನ್ಯಾಟೋ ಮಿಲಿಟರಿ ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಏಳು ಮಂದಿ ಮಂಗಳೂರಿಗರು ಸುರಕ್ಷಿತವಾಗಿ ತಮ್ಮ ಮನೆಗೆ ಹಿಂದಿರುಗಿದ್ದಾರೆ.

ಒಂದು ವೇಳೆ ಇನ್ನು ಕೆಲವರು ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದರೆ ಅವರನ್ನು ಮಂಗಳೂರಿಗೆ ಕರೆತರಲು ಇಲಾಖೆ ಸಹಾಯ ಮಾಡಲಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಬುಧವಾರ ಹೇಳಿದ್ದಾರೆ.

ಏಳು ಮಂದಿ ಅಫ್ಘಾನಿಸ್ತಾನದಿಂದ ಬಂದ ನಂತರ ತಮ್ಮ ಕಚೇರಿಯಲ್ಲಿ ಸಭೆ ನಂತರ ಮಾತನಾಡಿದ ಕಮೀಷನರ್, ಅಫ್ಘಾನಿಸ್ತಾನದಲ್ಲಿ ಕುಟುಂಬ ಸದಸ್ಯರು ಸಿಲುಕಿದ್ದರೆ ಅಂತರವರು ನಗರದ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬಹುದು ಎಂದು ತಿಳಿಸಿದರು.

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ರಾಜ್ಯದ ಜನರಿಗೆ ನೆರವು ನೀಡಲು ಸಿಐಡಿ ಎಡಿಜಿಪಿ ಉಮೇಶ್ ಕುಮಾರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಒಂದು ವೇಳೆ ಅಫ್ಘಾನಿಸ್ತಾನದಲ್ಲಿ ಮಂಗಳೂರಿನ  ಜನರು ಸಿಲುಕಿದ್ದರೆ 
ಉಮೇಶ್ ಕುಮಾರ್ ಅವರಿಗೆ ಮಾಹಿತಿ ನೀಡುತ್ತೇವೆ ಎಂದರು.

ಪ್ರಸಾದ್ ಅಂಚನ್, ದಿನೇಶ್ ರೈ, ಶ್ರವಣ್ ಅಂಚನ್, ಜಗದೀಶ್ ಪೂಜಾರಿ, ದೇಶ್ಮಂಡೆ ದೇವಿಡ್ ಡಿಸೋಜಾ, ಡೆನ್ಸಿಲ್ ಮಾಂಟೆರೋ, ಮೆಲ್ವಿನ್ ಮಾಂಟೆರೋ ಭಾರತೀಯ ವಾಯುಪಡೆ ವಿಮಾನ ಮೂಲಕ ಮಂಗಳೂರು ನಗರಕ್ಕೆ ವಾಪಸ್ಸಾದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT