ಅಫ್ಘಾನಿಸ್ತಾನದಿಂದ ಬಂದವರ ಜೊತೆಗೆ ಮಾತನಾಡುತ್ತಿರುವ ಪೊಲೀಸ್ ಆಯುಕ್ತ ಶಶಿಕುಮಾರ್ 
ರಾಜ್ಯ

ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದ ಏಳು ಮಂದಿ ಸುರಕ್ಷಿತವಾಗಿ ಮಂಗಳೂರಿಗೆ ವಾಪಸ್ 

ಅಫ್ಘಾನಿಸ್ತಾನದಲ್ಲಿ ನ್ಯಾಟೋ ಮಿಲಿಟರಿ ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಏಳು ಮಂದಿ ಮಂಗಳೂರಿಗರು ಸುರಕ್ಷಿತವಾಗಿ ತಮ್ಮ ಮನೆಗೆ ಹಿಂದಿರುಗಿದ್ದಾರೆ.

ಮಂಗಳೂರು: ಅಫ್ಘಾನಿಸ್ತಾನದಲ್ಲಿ ನ್ಯಾಟೋ ಮಿಲಿಟರಿ ನೆಲೆಯಲ್ಲಿ ಕೆಲಸ ಮಾಡುತ್ತಿದ್ದ ಏಳು ಮಂದಿ ಮಂಗಳೂರಿಗರು ಸುರಕ್ಷಿತವಾಗಿ ತಮ್ಮ ಮನೆಗೆ ಹಿಂದಿರುಗಿದ್ದಾರೆ.

ಒಂದು ವೇಳೆ ಇನ್ನು ಕೆಲವರು ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದರೆ ಅವರನ್ನು ಮಂಗಳೂರಿಗೆ ಕರೆತರಲು ಇಲಾಖೆ ಸಹಾಯ ಮಾಡಲಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಬುಧವಾರ ಹೇಳಿದ್ದಾರೆ.

ಏಳು ಮಂದಿ ಅಫ್ಘಾನಿಸ್ತಾನದಿಂದ ಬಂದ ನಂತರ ತಮ್ಮ ಕಚೇರಿಯಲ್ಲಿ ಸಭೆ ನಂತರ ಮಾತನಾಡಿದ ಕಮೀಷನರ್, ಅಫ್ಘಾನಿಸ್ತಾನದಲ್ಲಿ ಕುಟುಂಬ ಸದಸ್ಯರು ಸಿಲುಕಿದ್ದರೆ ಅಂತರವರು ನಗರದ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬಹುದು ಎಂದು ತಿಳಿಸಿದರು.

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ರಾಜ್ಯದ ಜನರಿಗೆ ನೆರವು ನೀಡಲು ಸಿಐಡಿ ಎಡಿಜಿಪಿ ಉಮೇಶ್ ಕುಮಾರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಒಂದು ವೇಳೆ ಅಫ್ಘಾನಿಸ್ತಾನದಲ್ಲಿ ಮಂಗಳೂರಿನ  ಜನರು ಸಿಲುಕಿದ್ದರೆ 
ಉಮೇಶ್ ಕುಮಾರ್ ಅವರಿಗೆ ಮಾಹಿತಿ ನೀಡುತ್ತೇವೆ ಎಂದರು.

ಪ್ರಸಾದ್ ಅಂಚನ್, ದಿನೇಶ್ ರೈ, ಶ್ರವಣ್ ಅಂಚನ್, ಜಗದೀಶ್ ಪೂಜಾರಿ, ದೇಶ್ಮಂಡೆ ದೇವಿಡ್ ಡಿಸೋಜಾ, ಡೆನ್ಸಿಲ್ ಮಾಂಟೆರೋ, ಮೆಲ್ವಿನ್ ಮಾಂಟೆರೋ ಭಾರತೀಯ ವಾಯುಪಡೆ ವಿಮಾನ ಮೂಲಕ ಮಂಗಳೂರು ನಗರಕ್ಕೆ ವಾಪಸ್ಸಾದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT