ಮಂಗಳೂರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರನ್ನು ಭೇಟಿ ಮಾಡಿದ ವಾಪಸಿಗರು 
ರಾಜ್ಯ

ತಾಲಿಬಾನ್ ಹಿಡಿತದಿಂದ ಮಂಗಳೂರಿನ 7 ಮಂದಿ ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

ಮಂಗಳೂರಿನ 7 ಮಂದಿ ಅಫ್ಘಾನಿಸ್ತಾನದಲ್ಲಿ ಕಾರ್ಯಾಚರಿಸುತ್ತಿದ್ದ ನ್ಯಾಟೊ ಪಡೆಗಳ ಜೊತೆ ಕೆಲಸ ನಿರ್ವಹಿಸುತ್ತಿದ್ದರು.

ಮಂಗಳೂರು: ಯುದ್ಧಗ್ರಸ್ಥ ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿದ್ದ ನಗರದ 7 ಮಂದಿ ಸುರಕ್ಷಿತವಾಗಿ ಮರಳಿದ್ದಾರೆ. ಮಂಗಳೂರಿನ 7 ಮಂದಿ ಅಫ್ಘಾನಿಸ್ತಾನದಲ್ಲಿ ಕಾರ್ಯಾಚರಿಸುತ್ತಿದ್ದ ನ್ಯಾಟೊ ಪಡೆಗಳ ಜೊತೆ ಕೆಲಸ ನಿರ್ವಹಿಸುತ್ತಿದ್ದರು. 

ತಾಲಿಬಾನ್ ಹಿಡಿತದಿಂದ ಪಾರಾಗಿ ಬಂದ 7 ಮಂದಿ ನಗರದ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಅಫ್ಘಾನಿಸ್ತಾನದಲ್ಲಿ ಇನ್ನೂ ಯಾರದಾದರೂ ಕುಟುಂಬಸ್ಥರು ಸಿಲುಕಿಕೊಂಡಿದ್ದರೆ ತಮ್ಮನ್ನು ಸಂಪರ್ಕಿಸಬಹುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ. 

ಅಫ್ಘಾನಿಸ್ತಾನದಲ್ಲಿ ಸಿಲುಕಿಕೊಂಡಿರುವ ಕರ್ನಾಟಕದವರ ರಕ್ಷಣೆಗಾಗಿ ಸರ್ಕಾರ ಎಡಿಜಿಪಿ ಉಮೇಶ್ ಕುಮಾರ್ ಅವರನ್ನು ನೇಮಕ ಮಾಡಿದೆ. ಕುಟುಂಬಸ್ಥರು ಅವರ ಸಹಾಯವನ್ನು ಪಡೆದುಕೊಳ್ಳಬಹುದಾಗಿದೆ. 

ಪ್ರಸಾದ್ ಅಂಚನ್, ದಿನೇಶ್ ರೈ, ಶ್ರವಣ್ ಅಂಚನ್, ಜಗದೀಶ್ ಪೂಜಾರಿ, ಡೆಸ್ಮಂಡ್ ಡೇವಿಡ್ ಡಿಸೋಜ, ಡೆನ್ಸಿಲ್ ಮೋತೇರೊ, ಮೆಲ್ವಿನ್ ಮೊಂತೇರೊ ಒಟ್ಟು ಏಳು ಮಂದಿ ಭಾರತೀಯ ವಾಯುಪಡೆ ವಿಮಾನದಲ್ಲಿ ಮರಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!