ನಂದಿ ಹಿಲ್ಸ್ 
ರಾಜ್ಯ

ನಂದಿ ಹಿಲ್ಸ್ ಭೂಕುಸಿತಕ್ಕೆ ಬ್ಲಾಸ್ಟ್ ಗಳು ಕಾರಣ: ಅಧಿಕಾರಿಗಳು, ಪರಿಸರ ತಜ್ಞರ ಶಂಕೆ

ಚಿಕ್ಕಬಳ್ಳಾಪುರದಲ್ಲಿ ಸಾಮಾನ್ಯವಾಗಿ ವಾರ್ಷಿಕ 700- 750 ಮಿಮೀ. ಮಳೆಯಾಗುತ್ತದೆ. ಆದರೆ ಮಂಗಳವಾರ ರಾತ್ರಿ ಒಂದೇ ದಿನ 100 ಮಿ.ಮೀ ಮಳೆ ಬಿದ್ದಿತ್ತು.

ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ನಂದಿ ಹಿಲ್ಸ್ ಧಾಮದಲ್ಲಿ ಸಂಭವಿಸಿದ ಭೂಕುಸಿತಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಸುತ್ತಮುತ್ತಲ ಪರಿಸರದಲ್ಲಿ ನಡೆಸಲಾದ ಸ್ಫೋಟ ಕಾರಣವಿರುವ ಶಂಕೆಯನ್ನು ಪರಿಸರ ತಜ್ಞರು ವ್ಯಕ್ತಪಡಿಸಿದ್ದಾರೆ.

ಭೂಕುಸಿತ ನೈಸರ್ಗಿಕವಾಗಿ ಸಂಭವಿಸಿರುವ ಸಾಧ್ಯತೆ ಇದ್ದರೂ, ಸುತ್ತಮುತ್ತಲ ಪ್ರದೇಶಗಳಲ್ಲಿ ಮಾಡಲಾಗುತ್ತಿರುವ ಗಣಿಗಾರಿಕೆ ಕೆಲಸಗಳಿಂದಾಗಿ ಭೂ ಕುಸಿತ ಸಂಭವಿಸಿರುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ ಎಂದು ಪರಿಸರ ತಜ್ಞರು ಹೇಳಿದ್ದಾರೆ. 

ನಂದಿ ಹಿಲ್ಸ್ ನಲ್ಲಿ ಮಂಗಳವಾರ ಬ್ರಹ್ಮಗಿರಿ ಬಳಿಯ ರಂಗಪ್ಪ ಸರ್ಕಲ್ ಎನ್ನುವ ಪ್ರಾಂತ್ಯದಲ್ಲಿ ಭೂಕುಸಿತ ಸಂಭವಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಆರ್ ಲತಾ, ನಂದಿ ಹಿಲ್ಸ್ ಒಂದು ಬೃಹತ್ ಶಿಲಾಕಲ್ಲಾಗಿದ್ದು ಕಾಲಾಂತರದಲ್ಲಿ ಅದರ ಮೇಲೆ ಮಣ್ಣು, ಕಲ್ಲುಗಳು ತುಂಬಿಕೊಂಡು ಪರ್ವತ ರೂಪ ತಾಳಿದೆ.

ಚಿಕ್ಕಬಳ್ಳಾಪುರದಲ್ಲಿ ಸಾಮಾನ್ಯವಾಗಿ ವಾರ್ಷಿಕ 700- 750 ಮಿಮೀ. ಮಳೆಯಾಗುತ್ತದೆ. ಆದರೆ ಮಂಗಳವಾರ ರಾತ್ರಿ ಒಂದೇ ದಿನ 100 ಮಿ.ಮೀ ಮಳೆ ಬಿದ್ದಿತ್ತು. ಇದರಿಂದಾಗಿ ಮಣ್ಣು ಮತ್ತು ಕಲ್ಲುಗಳು ಸವೆದು ನೀರಲ್ಲಿ ಕೊಚ್ಚಿಕೊಂಡು ಹೋಗಿ ಭೂಕುಸಿತಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT