ಸಾಂದರ್ಭಿಕ ಚಿತ್ರ 
ರಾಜ್ಯ

ಸಾರ್ವಜನಿಕ ಗಣೇಶೋತ್ಸವ ಮೇಲಿನ ನಿರ್ಬಂಧ ಸಡಿಲಿಸದಂತೆ ತಜ್ಞರ ಎಚ್ಚರಿಕೆ: ಬಲಪಂಥೀಯರ ವಿರೋಧ

ಯಾವುದೇ ಸಾರ್ವಜನಿಕ ಸಮಾರಂಭಗಳು, ಮೆರವಣಿಗೆಗಳಿಂದ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗುವುದರಿಂದ ಸರ್ಕಾರ ಗಣೇಶೋತ್ಸವ ಸಂಬಂಧ ಸಾರ್ವಜನಿಕ ಆಚರಣೆಗೆ ನಿರ್ಬಂಧ ವಿಧಿಸಿತ್ತು. 

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ರೂಪಿಸಲಾಗಿರುವ ಕೊರೊನಾ ಮಾರ್ಗಸೂಚಿಯನ್ನು ಪರಿಸ್ಥಿತಿ ನೋಡಿಕೊಂಡು ಪರಿಷ್ಕರಣೆಗೆ ಒಳಪಡಿಸಲಾಗುವ ಸೂಚನೆ ನೀಡಿದ್ದಾರೆ. 

ಬಲಪಂಥೀಯರು ಸಾರ್ವಜನಿಕ ಗಣೇಶೋತ್ಸವ ಆಚರಣೆಗಳಿಗೆ, ಮೆರವಣಿಗೆಗಳಿಗೆ ಅವಕಾಶ ಮಾಡಿಕೊಂಡುವಂತೆ ಒತ್ತಾಯಿಸಿದ್ದವು. ಆದರೆ, ಯಾವುದೇ ಸಾರ್ವಜನಿಕ ಸಮಾರಂಭಗಳು, ಮೆರವಣಿಗೆಗಳಿಂದ ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗುವುದರಿಂದ ಸರ್ಕಾರ ಗಣೇಶೋತ್ಸವ ಸಂಬಂಧ ಸಾರ್ವಜನಿಕ ಆಚರಣೆಗೆ ನಿರ್ಬಂಧ ವಿಧಿಸಿತ್ತು. 

ಆದರೆ ಕೆಲ ದಿನಗಳ ಹಿಂದೆ ಬಿಜೆಪಿ ಶಾಸಕ ಬಸವರಾಜ ಯತ್ನಾಳ್ ಅವರು ಗಣೇಶೋತ್ಸವ ಅಥವಾ ಯಾವುದೇ ಹಿಂದೂ ಆಚರಣೆಗೆ ಯಾವುದೇ ನಿರ್ಬಂಧ ಹೇರದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದರು. ಅಲ್ಲದೆ ಮುಖ್ಯಮಂತ್ರಿಗಳು ನಿರ್ಬಂಧ ವಿಧಿಸಿದರೂ ತಾವೂ ಸುಮ್ಮನೆ ಇರುವುದಿಲ್ಲ ಎಂದು ಧಮ್ಕಿ ಹಾಕಿದ್ದರು. 

ಇದೇ ವೇಳೆ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡದಿದ್ದರೆ ತಾವು ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ನಾಯಕರ ನಿವಾಸದ ಮುಂದೆ ಧರಣಿ ಕೂರುವುದಾಗಿ ಶ್ರೀರಾಮ ಸೇನೆಯ ರಾಜ್ಯ ಕಾರ್ಯದರ್ಶಿ ಆನಂದ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT