ಇಸ್ಕಾನ್ ದೇಗುಲ 
ರಾಜ್ಯ

ಆಗಸ್ಟ್ 29, 30ರಂದು ಕೃಷ್ಣ ಜನ್ಮಾಷ್ಟಮಿ: ಇಸ್ಕಾನ್ ಭೇಟಿಗೆ ಜನರಿಗೆ ಅನುಮತಿ ಇಲ್ಲ, ಆನ್ ಲೈನ್ ನಲ್ಲಿ ವೀಕ್ಷಣೆಗೆ ಅವಕಾಶ

ಬೆಂಗಳೂರಿನ ಇಸ್ಕಾನ್ ದೇಗುಲದಲ್ಲಿ ಇದೇ ಆಗಸ್ಟ್ 29 ಮತ್ತು 30ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕೊರೊನಾ ಸಾಂಕ್ರಾಮಿಕ ಹಿನ್ನಲೆಯಲ್ಲಿ ಈ ಬಾರಿಯೂ ಇಸ್ಕಾನ್ ಭೇಟಿಗೆ ಜನರಿಗೆ ಅವಕಾಶ ನಿರಾಕರಿಸಲಾಗಿದೆ.

ಬೆಂಗಳೂರು: ಬೆಂಗಳೂರಿನ ಇಸ್ಕಾನ್ ದೇಗುಲದಲ್ಲಿ ಇದೇ ಆಗಸ್ಟ್ 29 ಮತ್ತು 30ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕೊರೊನಾ ಸಾಂಕ್ರಾಮಿಕ ಹಿನ್ನಲೆಯಲ್ಲಿ ಈ ಬಾರಿಯೂ ಇಸ್ಕಾನ್ ಭೇಟಿಗೆ ಜನರಿಗೆ ಅವಕಾಶ ನಿರಾಕರಿಸಲಾಗಿದೆ.

ಈ ಬಗ್ಗೆ ಇಸ್ಕಾನ್ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ದೇಗುಲಕ್ಕೆ ಭೇಟಿ ನೀಡುವ ಜನರ ಅನುಪಸ್ಥಿತಿಯಲ್ಲಿ ಹಾಲಿ ವರ್ಷದ ಜನ್ಮಾಷ್ಟಮಿ ಆಚರಣೆಗಳು ನಡೆಯಲಿವೆ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ ಜನ್ಮಾಷ್ಟಮಿ ಆಚರಣೆಗಳನ್ನು ಭಕ್ತರು ಆನ್ ಲೈನ್ ನಲ್ಲಿ ಕಣ್ತುಂಬಿಕೊಳ್ಳಬಹುದು ಎಂದು ಬೆಂಗಳೂರು ಇಸ್ಕಾನ್ ದೇಗುಲದ ಸ್ಟ್ರಾಟೆಜಿಕ್ ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥ ನವೀನ್ ನೀರದ ದಾಸ ತಿಳಿಸಿದ್ದಾರೆ.

ಅಲ್ಲದೆ ಇದೇ ವಿಚಾರವಾಗಿ ಇಸ್ಕಾನ್ ಅಧಿಕೃತ ಟ್ವಿಟರ್ ಖಾತೆಯಲ್ಲೂ ಮಾಹಿತಿ ನೀಡಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT