ಜ್ಯೋತಿರಾದಿತ್ಯ ಸಿಂಧಿಯಾ 
ರಾಜ್ಯ

ವಿಮಾನಯಾನ ಮೂಲಸೌಕರ್ಯ ಕುರಿತು ಸಿಎಂ ಬೊಮ್ಮಾಯಿಗೆ ಕೇಂದ್ರ ಸಚಿವ ಸಿಂಧಿಯಾ ಪತ್ರ

ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು(ಎಎಐ) ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ವಿಸ್ತರಣೆಯನ್ನು ಕೈಗೊಂಡಿದ್ದರಿಂದ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ರಾಜ್ಯದಲ್ಲಿ ವಿಮಾನಯಾನ...

ಬೆಂಗಳೂರು: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು(ಎಎಐ) ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ವಿಸ್ತರಣೆಯನ್ನು ಕೈಗೊಂಡಿದ್ದರಿಂದ, ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ರಾಜ್ಯದಲ್ಲಿ ವಿಮಾನಯಾನ ಮೂಲಸೌಕರ್ಯವನ್ನು ಬಲಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದಲ್ಲಿ ವಿಮಾನಯಾನ ಮೂಲಸೌಕರ್ಯವನ್ನು ಬಲಪಡಿಸುವ ಯೋಜನೆಗಳನ್ನು ತ್ವರಿತಗೊಳಿಸಲು ಸಹಕಾರ ನೀಡುವಂತೆ ಸಿಎಂ ಬೊಮ್ಮಾಯಿಗೆ ಕೇಂದ್ರ ಸಚಿವರು ವಿನಂತಿಸಿದ್ದಾರೆ. 

ಈ ಸಂಬಂಧ ನಾಗರಿಕ ವಿಮಾನಯಾನ ಸಚಿವಾಲಯವು ನೀಡಿದ ಪ್ರಕಟಣೆಯಲ್ಲಿ ಸಿಂಧಿಯಾ ಅವರು ಬೆಳಗಾವಿ, ಮೈಸೂರು, ಶಿವಮೊಗ್ಗ ಮತ್ತು ವಿಜಯಪುರದ ವಿಮಾನ ನಿಲ್ದಾಣ ಯೋಜನೆಗಳ ಬಗ್ಗೆ ಬೊಮ್ಮಾಯಿ ಅವರ ಗಮನ ಸೆಳೆದಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಎಎಐ 370 ಎಕರೆ ಭೂಮಿ ಅವಶ್ಯಕತೆ ಇದೆ ಎಂದು ಅಂದಾಜಿಸಿದ್ದು, ಅದರಲ್ಲಿ 348.6 ಎಕರೆಗಳನ್ನು ಹಸ್ತಾಂತರಿಸಲಾಗಿದೆ ಮತ್ತು ಮೈಸೂರಿನಲ್ಲಿ ಎಎಐ 240 ಎಕರೆಗಳನ್ನು ಮಂಜೂರು ಮಾಡಲು ವಿನಂತಿಸಿದೆ, ಆದರೆ ಅದನ್ನು ರಾಜ್ಯ ಸರ್ಕಾರ ಇನ್ನೂ ಹಸ್ತಾಂತರಿಸಿಲ್ಲ ಎಂದು ಉಲ್ಲೇಖಿಸಲಾಗಿದೆ.

ರಾಜ್ಯ ಸರ್ಕಾರದ ಭಾಗದಲ್ಲಿ 7.55 ಕೋಟಿ ಬಾಕಿ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT