ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಹಿಂದೂ ಬಲಪಂಥೀಯ ಸಂಘಟನೆಯ ಮೂವರ ಬಂಧನ

ಮಂಗಳೂರಿನಲ್ಲಿ ಇನ್ನೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದ್ದು, ಹಿಂದೂ ಜಾಗರಣ ವೇದಿಕೆಯ ಕೆಲವು ಸದಸ್ಯರು, ಹಿಂದೂ ಬಲಪಂಥೀಯ ಸಂಘಟನೆಯು ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ಮಂಗಳೂರಿನಲ್ಲಿ ಇನ್ನೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದ್ದು, ಹಿಂದೂ ಜಾಗರಣ ವೇದಿಕೆಯ ಕೆಲವು ಸದಸ್ಯರು, ಹಿಂದೂ ಬಲಪಂಥೀಯ ಸಂಘಟನೆಯು ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬೇರೆ ಬೇರೆ ಧರ್ಮಕ್ಕೆ ಸೇರಿದ ಮೂವರು ಯುವಕರು ಮೂವರು ಸೇರಿದಂತೆ ಇಬ್ಬರು ಹುಡುಗಿಯರು ಜೊತೆಯಾಗಿ ನಿಂತು ಮಾತನಾಡುತ್ತಿದ್ದರು.ಅಲ್ಲಿಗೆ ಬಂದ ವಿವಿಧ ಸಂಘಟನೆಯ ಸದಸ್ಯರು ಅವರನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರಿಂಜ ದೇವಸ್ಥಾನದ ಕೊಳದ ಬಳಿ ಮಂಗಳೂರಿನಲ್ಲಿರುವ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳನ್ನು ನೋಡಿದ ಸ್ಥಳೀಯರು ಹಿಂದೂ ಬಲ ಪಂಥೀಯ ಸಂಘಟನೆಗಳಿಗೆ ಮಾಹಿತಿ ನೀಡಿದರು.

ಐದು ಬಲಪಂಥೀಯ ಸದಸ್ಯರ ಪೈಕಿ ಮೂವರನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್ ಪಿ ಹೃಷಿಕೇಶ್ ಸೋನವಾನೆ ತಿಳಿಸಿದ್ದಾರೆ. ಪೂಂಜಾಲಕಟ್ಟೆ ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ ನಡೆದಿರುವ ಎರಡನೇ ನೈತಿಕ ಪೊಲೀಸ್ ಪ್ರಕರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?

Bengaluru: ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಗಂಭೀರ ಗಾಯ, ಆಸ್ಪತ್ರೆಗೆ ದಾಖಲು!

148 ವರ್ಷಗಳಲ್ಲಿ ಇದೇ ಮೊದಲು... ವೆಸ್ಟ್ ಇಂಡೀಸ್ ವಿರುದ್ಧ ಶತಕ ಸಿಡಿಸಿ ಅತ್ಯಪರೂಪ, ವಿಚಿತ್ರ ದಾಖಲೆ ಬರೆದ KL Rahul

ಡಲ್ಲಾಸ್‌ನ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಹೈದರಾಬಾದ್ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ

ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿ

SCROLL FOR NEXT