ಸಾಂದರ್ಭಿಕ ಚಿತ್ರ 
ರಾಜ್ಯ

19 ವರ್ಷದ ಯುವಕನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ ಕುಟುಂಬ

ಕಮಲಾಪುರ ತಾಲೂಕಿನ ಲಾಡ್ ಮುಗಳಿ ಗ್ರಾಮದ ಬ್ರೈನ್ ಡೆಡ್‌ ಆದ ಯುವಕನ ಕುಟುಂಬ ಸದಸ್ಯರು ಆತನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ್ದಾರೆ.

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡ್ ಮುಗಳಿ ಗ್ರಾಮದ ಬ್ರೈನ್ ಡೆಡ್‌ ಆದ ಯುವಕನ ಕುಟುಂಬ ಸದಸ್ಯರು ಆತನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ್ದಾರೆ.

ಲಾಡ್ ಮುಗಳಿ ಗ್ರಾಮದ ಮಹೇಶ್ ರೇವಣ ಸಿದ್ದಪ್ಪ ಎಂಬ 19 ವರ್ಷದ ಯುವಕ ಆಗಸ್ಟ್ 20 ಮೇಲಿನ ಅಂತಸ್ತಿನಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ. ನಂತರ ಯುನೈಟೆಡ್ ಆಸ್ಪತ್ರೆಗೆ ಆತನನನ್ನು ದಾಖಲು ಮಾಡಲಾಗಿತ್ತು. ಕೆಲ ದಿನಗಳ ನಂತರ ಕಲಬುರಗಿಯ ಚಿರಾಯು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. 

ವೈದ್ಯರು ವಿವಿಧ ಪ್ರಕಾರದ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಆತನ ಮೆದುಳು ನಿಷ್ಕ್ರೀಯಗೊಂಡಿರುವುದಾಗಿ ಕಂಡುಬಂದಿತ್ತು. ಈ ಬಗ್ಗೆ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿ, ಅಂಗಾಂಗ ದಾನ ಮಾಡಲು ಇಷ್ಟವಿದೆಯೇ ಎಂದು ಕೇಳಲಾಗಿತ್ತು. ಅದಕ್ಕೆ ಅವರು ಸಮ್ಮತಿಸಿದ್ದರು. ಕುಟುಂಬದ ಸದಸ್ಯರ ಒಪ್ಪಿಗೆ ಪಡೆದ ನಂತರ ಮೃತದೇಹವನ್ನು ಪರೀಕ್ಷಿಸಿ, ಕಿಡ್ನಿ, ಲಿವರ್ ಮತ್ತು ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಲಾಯಿತು. ಇಂದು ಬೆಳಗ್ಗೆ ಅಂಗಾಂಗಳನ್ನು ತೆಗೆಯಲಾಯಿತು ಎಂದು ಚಿರಾಯು ಆಸ್ಪತ್ರೆ ಮುಖ್ಯಸ್ಥ ಡಾ. ಮಂಜುನಾಥ್ ದೊಶೆಟ್ಟಿ ಹೇಳಿದರು.

ಮಹೇಶ್ ಕಿಡ್ನಿಯನ್ನು ಚಿರಾಯು ಆಸ್ಪತ್ರೆಯಲ್ಲಿನ ರೋಗಿಯೊಬ್ಬರಿಗೆ ಅಳವಡಿಸಲಾಯಿತು.ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದು ಲಿವರ್ ಗೆ ಮನವಿ ಮಾಡಿ ವೈದ್ಯರ ತಂಡವೊಂದನ್ನು ಆಸ್ಪತ್ರೆಗೆ ಕಳುಹಿಸಿತ್ತು. ನಂತರ ಅದನ್ನು ಕಲಬುರಗಿ ಮತ್ತು ತೆಲಂಗಾಣದ ಪೊಲೀಸರ ನೆರವಿನಿಂದ ಜಿರೋ ಟ್ರಾಫಿಕ್ ನಲ್ಲಿ ಹೈದ್ರಾಬಾದ್ ಗೆ ಕಳುಹಿಸಲಾಯಿತು. ತದನಂತರ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಯಿತು. ಕಣ್ಣುಗಳನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ನೀಡಲಾಯಿತು. ಮೃತನ ಅಂಗಾಂಗಗಳನ್ನು ಕೆಲ ಜನರ ಜೀವ ರಕ್ಷಣೆಗೆ ನೀಡುವ ಮೃತ ಮಹೇಶ್ ಕುಟುಂಬ ಸದಸ್ಯರು ಸ್ವಲ್ಪ ನೆಮ್ಮದಿಯಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT