ಮುರುಗೇಶ ನಿರಾಣಿ 
ರಾಜ್ಯ

‘ಕಲಬುರಗಿ ಜನ ಸೋಂಬೇರಿಗಳು’ ಹೇಳಿಕೆಗೆ ಕೊನೆಗೂ ವಿಷಾದ ವ್ಯಕ್ತಪಡಿಸಿದ ಸಚಿವ ನಿರಾಣಿ

‘ಕಲಬುರಗಿ ಜಿಲ್ಲೆಯ ಜನರು ಸೋಂಬೇರಿಗಳು’ ಎಂಬ ತಮ್ಮ ಹೇಳಿಕೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರು ಕೊನೆಗೂ ವಿಷಾದ ವ್ಯಕ್ತಪಡಿಸಿದ್ದಾರೆ.

ಕಲಬುರಗಿ: ‘ಕಲಬುರಗಿ ಜಿಲ್ಲೆಯ ಜನರು ಸೋಂಬೇರಿಗಳು’ ಎಂಬ ತಮ್ಮ ಹೇಳಿಕೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರು ಕೊನೆಗೂ ವಿಷಾದ ವ್ಯಕ್ತಪಡಿಸಿದ್ದಾರೆ.

ಇಂದು ನಗರದ ಲುಂಬಿಣಿ ಗ್ರ್ಯಾಂಡ್ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನಾನು ಮನಸ್ಸಿನಿಂದ ಆ ಮಾತು ಆಡಿಲ್ಲ. ಆ ಮಾತು ನನ್ನ ಬಾಯಿಂದ ಹೊರ ಬಂದಿರುವುದಕ್ಕೆ ನನಗೂ ಬೇಜಾರಿದೆ. ನಾನು ಹೇಳುವ ಆ ಉದ್ದೇಶ ಅದಾಗಿರಲಿಲ್ಲ. ಕಲಬುರಗಿಯ ಅಭಿವೃದ್ಧಿ ಆಗಬೇಕು ಎಂಬ ದೃಷ್ಟಿಕೋನದಲ್ಲಿ ಹೇಳಿದ್ದೆ ಎಂದಿದ್ದಾರೆ.

ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಕಲಬುರಗಿ ಜಿಲ್ಲೆ ಹಾಗೂ ಜನತೆ ಬಗ್ಗೆ ನನಗೆ ಅಪಾರವಾದ ಕಾಳಜಿ ಇದೆ ಎಂದು ಸಚಿವರು ಹೇಳಿದ್ದಾರೆ.

‘ಕಲಬುರ್ಗಿ ಜಿಲ್ಲೆಯ ಜನರು ಸೋಂಬೇರಿಗಳು’ ಎಂದು ಬಾಗಲಕೋಟೆಯಲ್ಲಿ ಇತ್ತೀಚೆಗೆ ಹೇಳಿಕೆ ನೀಡಿದ್ದಕ್ಕೆ ಜಿಲ್ಲೆಯ ಜನರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಜಿಲ್ಲೆಯ ಜನಗಳ ಬಗ್ಗೆ ನೀಡಿದ ಹೇಳಿಕೆಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಮುಖಂಡ ಸುಭಾಷ್ ರಾಠೋಡ, ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಸೇರಿದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ