ಲಸಿಕೆ ಪಡೆಯುತ್ತಿರುವ ಆರೋಗ್ಯ ಕಾರ್ಯಕರ್ತರು 
ರಾಜ್ಯ

ಕರ್ನಾಟಕ: ಲಸಿಕೆಯ 6 ತಿಂಗಳ ನಂತರ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್-19 ಪ್ರತಿಕಾಯಗಳ ಪರೀಕ್ಷೆ

ಕೋವಿಡ್-19 ಲಸಿಕೆಯ ಎರಡೂ ಡೋಸ್ ಗಳನ್ನು ಪಡಿದಿರುವ ಆರೋಗ್ಯ ಕಾರ್ಯಕರ್ತರಿಗೆ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಕೋವಿಡ್-19 ಪ್ರತಿಕಾಯಗಳ ಪರೀಕ್ಷೆ ನಡೆಸುತ್ತಿದೆ.

ಬೆಂಗಳೂರು: ಕೋವಿಡ್-19 ಲಸಿಕೆಯ ಎರಡೂ ಡೋಸ್ ಗಳನ್ನು ಪಡಿದಿರುವ ಆರೋಗ್ಯ ಕಾರ್ಯಕರ್ತರಿಗೆ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಕೋವಿಡ್-19 ಪ್ರತಿಕಾಯಗಳ ಪರೀಕ್ಷೆ ನಡೆಸುತ್ತಿದೆ.

ಆರೋಗ್ಯ ಕಾರ್ಯಕರ್ತರು ಎರಡೂ ಡೋಸ್ ಗಳ ಲಸಿಕೆಯನ್ನು ಪಡೆದು 6 ತಿಂಗಳು ಪೂರ್ಣಗೊಳಿಸಿದ್ದು, ಈ ಅವಧಿಯಲ್ಲಿ ಪ್ರತಿಕಾಯಗಳ ಕುಸಿತ ಉಂಟಾಗಿದೆಯೇ? ಉಂಟಾಗಿದ್ದರೆ ಮತ್ತೊಂದು ಡೋಸ್ ಲಸಿಕೆ ಅಗತ್ಯವಿದೆಯೇ ಎಂಬುದನ್ನು ಅರಿಯಲು ಈ ಪರೀಕ್ಷೆ ನಡೆಸಲಾಗುತ್ತಿದೆ.

ಫೆಬ್ರವರಿ ತಿಂಗಳ ವೇಳೆಗೆ ಈ ಆರೋಗ್ಯ ಕಾರ್ಯಕರ್ತರಿಗೆ ಎರಡೂ ಡೋಸ್ ಲಸಿಕೆಯನ್ನು ಪೂರ್ಣಗೊಳಿಸಲಾಗಿತ್ತು. ಏಪ್ರಿಲ್ ತಿಂಗಳಲ್ಲಿ ಪ್ರತಿಕಾಯಗಳಿಗಾಗಿ ಪರೀಕ್ಷೆ ನಡೆಸಿದ್ದಾಗ ಉತ್ತಮ ಫಲಿತಾಂಶ ಬಂದಿತ್ತು.

ಈ ಬಗ್ಗೆ ಮಾತನಾಡಿರುವ ಡಾ. ಸಿ.ಎನ್ ಮಂಜುನಾಥ್, "ಈಗ ಪರೀಕ್ಷೆಗೊಳಪಡುವ ಆರೋಗ್ಯ ಕಾರ್ಯಕರ್ತರನ್ನು ಸೆಪ್ಟೆಂಬರ್ ನಲ್ಲಿಯೂ ಪರೀಕ್ಷೆಗೊಳಪಡಿಸಲಾಗುತ್ತದೆ. ಏಪ್ರಿಲ್ ನಲ್ಲಿ ಪರೀಕ್ಷೆಗೊಳಪಡಿಸಿದಾಗ ಶೇ.80 ರಷ್ಟು ಮಂದಗೆ ಉತ್ತಮ ಪ್ರತಿಕಾಯಗಳಿತ್ತು. ಮರು ಪರೀಕ್ಷೆ ನಡೆಸುವ ವೇಳೆಗೆ ಎರಡೂ ಡೋಸ್ ಗಳನ್ನು ಪಡೆದು 6 ತಿಂಗಳು ಕಳೆದಿರುತ್ತದೆ. ಒಂದು ವೇಳೆ ಪ್ರತಿಕಾಯಗಳು ಕಡಿಮೆಯಾದಲ್ಲಿ ಆಸ್ಪತ್ರೆಗಳಲ್ಲಿರುವ ಮುನ್ನೆಲೆ ಕಾರ್ಯಕರ್ತರಿಗೆ ಹೆಚ್ಚುವರಿ ಡೋಸ್ ಗಳನ್ನು ನೀಡುವ ಬಗ್ಗೆ ಸ್ಪಷ್ಟತೆ ಸಿಗಲಿದೆ. ಪ್ರತಿಯೊಬ್ಬರಿಗೂ ಹೆಚ್ಚುವರಿ ಡೋಸ್ ನೀಡಲು ಸಾಧ್ಯವಿಲ್ಲ. ಈಗ ಲಸಿಕೆ ಪೂರೈಕೆ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ನಮ್ಮ ಸ್ವಂತ ಡೇಟಾವನ್ನು ಹೊಂದಿರಬೇಕೆಂದು ಡಾ. ಸಿ.ಎನ್ ಮಂಜುನಾಥ್ ಹೇಳಿದ್ದಾರೆ.

ಇದೇ ವೇಳೆ ಲಸಿಕೆ ಡೋಸ್ ಗಳ ನಡುವಿನ ಅಂತರವನ್ನು 12-16 ರಿಂದ 6-8 ವಾರಗಳಿಗೆ ಇಳಿಕೆ ಮಾಡಬೇಕೆಂದು, ಇಲ್ಲದೇ ಇದ್ದಲ್ಲಿ ಮೊದಲ ಡೋಸ್ ಗಳ ಲಸಿಕೆ ಪಡೆದ ನಂತರ ಸೋಂಕು ಎದುರಾದಲ್ಲಿ ಅದರ ವಿರುದ್ಧ ಹೋರಾಡಲು ಕಷ್ಟವಾಗುತ್ತದೆ. ಎರಡನೇ ಡೋಸ್ ಲಸಿಕೆಯಿಂದ ಉತ್ತಮ ಪ್ರತಿಕಾಯಗಳು ಉತ್ಪಾದನೆಯಾಗುತ್ತದೆ ಎಂದು ಡಾ. ಮಂಜುನಾಥ್ ಅಭಿಪ್ರಾಯಪಟ್ಟಿದ್ದಾರೆ.

ಆದರೆ ಪ್ರತಿಕಾಯಗಳ ಪರೀಕ್ಷೆ ನಡೆಸುವ ಬಗ್ಗೆ ಹಾಗೂ ಹೆಚ್ಚುವರಿ ಡೋಸ್ ನೀಡುವ ಬಗ್ಗೆ ವೈದ್ಯಕೀಯ ಸಮೂಹದಲ್ಲೇ ಭಿನ್ನಾಭಿಪ್ರಾಯಗಳಿವೆ ಎಂದು ಲಸಿಕೆ ನೀಡುವುದಕ್ಕಾಗಿ ಇರುವ ಎನ್ ಟಿಎಜಿ  ಡಾ.ಜಯಪ್ರಕಾಶ್ ಮುಳಿಯಿಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT