ಎಮ್ಮೆಯನ್ನು ಕೊಂದ ಸ್ಥಳದಲ್ಲಿ ಪೊಲೀಸರು ಮತ್ತು ಕಾರ್ಯಕರ್ತರು 
ರಾಜ್ಯ

ಮಂಗಳೂರು ಹೊರವಲಯದ ಎಮ್ಮೆಯ ಬರ್ಬರ ಹತ್ಯೆ: ಜಮೀನು ಮಾಲಿಕ ಬಂಧನ

ನಗರದ ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಲ್ಯ ಎಂಬಲ್ಲಿ ಜಮೀನಿಗೆ ನುಗ್ಗಿದ ಎಮ್ಮೆಯನ್ನು ಬರ್ಬರವಾಗಿ ಕೊಂದು ಹಾಕಿದ ಘಟನೆಗೆ ಸಂಬಂಧಿಸಿದಂತೆ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ನಗರದ ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಲ್ಯ ಎಂಬಲ್ಲಿ ಜಮೀನಿಗೆ ನುಗ್ಗಿದ ಎಮ್ಮೆಯನ್ನು ಬರ್ಬರವಾಗಿ ಕೊಂದು ಹಾಕಿದ ಘಟನೆಗೆ ಸಂಬಂಧಿಸಿದಂತೆ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಭಾನುವಾರ ಸಾಯಂಕಾಲ ಹೊಲಕ್ಕೆ ನುಗ್ಗಿದ್ದ ಎಮ್ಮೆಯನ್ನು ಹಿಡಿದು ಕೊಂದು ಹಾಕಲಾಗಿತ್ತು. ಎಮ್ಮೆಯ ಗಂಟಲನ್ನು ಆರೋಪಿಗಳು ಸೀಳಿ ಹಾಕಿದ್ದರು. ಸತ್ತು ಹೋದ ಎಮ್ಮೆಯನ್ನು ಕಂಡು ಸ್ಥಳೀಯರು ಹಿಂದೂಪರ ಸಂಘಟನೆಗಳಿಗೆ ಮಾಹಿತಿ ನೀಡಿದ್ದರು.

ಹಿಂದೂಪರ ಕಾರ್ಯಕರ್ತರು ಕೂಡಲೇ ಸ್ಥಳಕ್ಕೆ ಬಂದು ಜಮೀನಿನ ಮಾಲಿಕ ಜಯರಾಮ್ ಶೆಟ್ಟಿ ಇತರರ ಸಹಾಯದಿಂದ ಎಮ್ಮೆಯನ್ನು ಕೊಂದುಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಸ್ಥಳದಲ್ಲಿ ದ್ವಿಚಕ್ರ ವಾಹನವೊಂದನ್ನು ಬಿಟ್ಟು ಪರಾರಿಯಾಗಿದ್ದು ಎಮ್ಮೆಯನ್ನು ಕೊಂದು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.

ಪೊಲೀಸರಿಗೆ ವಿಷಯ ತಲುಪಿದಾಗ ಸ್ಥಳಕ್ಕೆ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಭೇಟಿ ನೀಡಿದರು. ಜಯರಾಮ್ ಶೆಟ್ಟಿಯವರನ್ನು ವಿಚಾರಣೆ ನಡೆಸಿ ತಮ್ಮ ಕಸ್ಟಡಿಗೆ ತೆಗೆದುಕೊಂಡು ಹೋದರು. ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಎಮ್ಮೆಯ ಮರಣೋತ್ತರ ಪರೀಕ್ಷೆ ಮುಗಿದ ಮೇಲೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT