ಬಸವರಾಜ ಬೊಮ್ಮಾಯಿ 
ರಾಜ್ಯ

ಕಡತ ವಿಲೇವಾರಿಗೆ ನೋಡೆಲ್ ಅಧಿಕಾರಿಗಳ ನೇಮಕ: ಸಿಎಂ ಬಸವರಾಜ ಬೊಮ್ಮಾಯಿ

ನ್ಯಾಯಾಲಯದಲ್ಲಿ ಮೊಕದ್ದಮೆ ಇರುವ ಕಾರಣ ಕಡತ ವಿಲೇವಾರಿಯಾಗದೇ ಇರುವ ಇಲಾಖೆಗಳಲ್ಲಿ ಕಡತ ವಿಲೇವಾರಿಗೆ ರಾಜ್ಯ ಸರ್ಕಾರ ನೋಡೆಲ್ ಅಧಿಕಾರಿಗಳನ್ನು ನೇಮಿಸುತ್ತಿದೆ...

ಬೆಂಗಳೂರು: ನ್ಯಾಯಾಲಯದಲ್ಲಿ ಮೊಕದ್ದಮೆ ಇರುವ ಕಾರಣ ಕಡತ ವಿಲೇವಾರಿಯಾಗದೇ ಇರುವ ಇಲಾಖೆಗಳಲ್ಲಿ ಕಡತ ವಿಲೇವಾರಿಗೆ ರಾಜ್ಯ ಸರ್ಕಾರ ನೋಡೆಲ್ ಅಧಿಕಾರಿಗಳನ್ನು ನೇಮಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಇಂದು ವಿಕಾಸಸೌಧದಲ್ಲಿ ನಡೆದ ಕೆಡಿಪಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಂದಾಯ, ನಗರಾಭಿವೃಧ್ಧಿ, ಶಿಕ್ಷಣ ಸೇರಿದಂತೆ ಐದಾರು ಇಲಾಖೆಗಳಲ್ಲಿ ಬಹಳಷ್ಟು ಕಡತಗಳು ವಿಲೇವಾರಿಯಾಗದೇ ಹಾಗೆ ಉಳಿದಿವೆ. ಅದರಲ್ಲಿಯೂ ನ್ಯಾಯಾಲಯದ ಪ್ರಕರಣದಿಂದಲೂ ಸಾಕಷ್ಟು ಕಡತಗಳು ಹಾಗೇ ಉಳಿದಿವೆ. ಹೀಗಾಗಿ ನ್ಯಾಯಾಲಯದ ಪ್ರಕರಣ ಕಾರಣ ಹಾಗೇ ಉಳಿದಿರುವ ಕಡತಗಳ ವಿಲೇವಾರಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದರು.

ಕಡತಗಳ ವಿಲೇವಾರಿಗೆ ಅಧೀನ ಕಾರ್ಯದರ್ಶಿ ಅಥವಾ ಉಪಕಾರ್ಯದರ್ಶಿಗಳನ್ನು ಕಡತ ವಿಲೇವಾರಿ ನೋಡೆಲ್ ಅಧಿಕಾರಿಯನ್ನಾಗಿ ನೇಮಿಸಲಾಗುತ್ತಿದ್ದು, ನೋಡೆಲ್ ಅಧಿಕಾರಿಗಳು ಕಾನೂನು ಇಲಾಖೆ ಸಂಯೋಜನೆ ಮಾಡಿ ಎರಡು ತಿಂಗಳೊಳಗೆ ಕಡತ ವಿಲೇವಾರಿ ಮಾಡಿಸಬೇಕು ಎಂದು ಸಿಎಂ ಹೇಳಿದರು.

ಕೆಡಿಪಿ ಸಭೆಯಲ್ಲಿ ಬಜೆಟ್‍ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳು ಕಾಲಮಿತಿಯೊಳಗೆ ಅನುಷ್ಠಾನವಾಗದೆ ವಿಳಂಬವಾಗುತ್ತಿರುವುದಕ್ಕೆ  ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ, ಬಜೆಟ್‍ನಲ್ಲಿ ಘೋಷಣೆ ಮಾಡಿದ ಕಾರ್ಯಕ್ರಮಗಳು ಆಯಾ ಆರ್ಥಿಕ ವರ್ಷದೊಳಗೆ ಸಂಪೂರ್ಣವಾಗಿ ಅನುಷ್ಠಾನವಾಗಬೇಕು. ಯಾವುದಾದರೂ ಇಲಾಖೆಯಲ್ಲಿ ಶೇ.100ರಷ್ಟು ಜಾರಿ ಮಾಡಿದ್ದೀರಾ? ಎಂಬ ಪ್ರಶ್ನೆಯನ್ನು ಅಧಿಕಾರಿಗಳ ಮುಂದಿಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT