ಡಾ. ಕೆ. ಸುಧಾಕರ್ 
ರಾಜ್ಯ

ಕೇರಳದಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್

ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಚಿಕ್ಕಬಳ್ಳಾಪುರ: ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ಮಾಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, "ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ ಜಿಲ್ಲೆಗಳಲ್ಲಿ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಬೇಕಿದೆ. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಲಾಗುವುದು. ಪ್ರತಿ ದಿನ ಗಡಿ ಜಿಲ್ಲೆಗಳಿಗೆ ಬರುವ ಜನರಿಗೆ ಯಾವ ರೀತಿ ನಿಯಮ ಪಾಲಿಸಬೇಕೆಂದು ಚರ್ಚಿಸಲಾಗುವುದು" ಎಂದರು.

"ಕೇರಳದಿಂದ ಪ್ರತಿ ದಿನ ಅನೇಕರು ಗಡಿ ಜಿಲ್ಲೆಗಳಿಗೆ ಬರುತ್ತಾರೆ. ಶಿಕ್ಷಣ, ಆರೋಗ್ಯ ಸೇವೆ, ನಿತ್ಯದ ವಹಿವಾಟುಗಳಿಗೆ ದಕ್ಷಿಣ ಕನ್ನಡ, ಉಡುಪಿ ಮೊದಲಾದ ಜಿಲ್ಲೆಗಳಿಗೆ ಜನರು ಬರುತ್ತಾರೆ. ಇನ್ನು ವಿಮಾನ, ರೈಲುಗಳ ಮೂಲಕ ಬರುವವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ಮಾಡಬೇಕಿದೆ. ಇದಕ್ಕಾಗಿ ಕೋವಿಡ್ ಮಾರ್ಗಸೂಚಿ ರೂಪಿಸಲಾಗುವುದು" ಎಂದು ಸಚಿವರು ತಿಳಿಸಿದ್ದಾರೆ.

"ಕೆಜಿಎಫ್ ನ ಶಿಕ್ಷಣ ಸಂಸ್ಥೆಯಲ್ಲಿ 32 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ. ಈ ಎಲ್ಲ ವಿದ್ಯಾರ್ಥಿಗಳಿಗೆ ಕೇರಳದಿಂದ ಬಂದವರಾಗಿದ್ದಾರೆ. ನಾಳೆ ಸಂಸ್ಥೆಗೆ ಹೋಗಿ ಸಂಸ್ಥೆಯ ಮೇಲೂ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳು ಕೇರಳದಿಂದ ಬಂದಾಗಲೇ ಅವರ ನೆಗೆಟಿವ್ ವರದಿ ಪಡೆಯಬೇಕಿತ್ತು. ಇದು ಸಂಸ್ಥೆಯ ಜವಾಬ್ದಾರಿಯೂ ಆಗಿದೆ. ರಾಜ್ಯದಲ್ಲಿ 50 ಸಾವಿರ ಪ್ರಕರಗಳನ್ನು 700-800 ಕ್ಕೆ ತರಲಾಗಿದೆ. ಸರ್ಕಾರ ಇಷ್ಟು ಕಷ್ಟಪಟ್ಟು ಕೆಲಸ ಮಾಡುತ್ತಿದೆ."

"ಮಕ್ಕಳಿಗೆ ಶೈಕ್ಷಣಿಕ ಭವಿಷ್ಯ ಹಾಗೂ ಸಂರಕ್ಷಣೆ ಸರ್ಕಾರದ ಜವಾಬ್ದಾರಿ. ಎಲ್ಲಾ ಶಾಲೆಗಳಲ್ಲಿ ವಿಶೇಷ ಮಾರ್ಗಸೂಚಿ ಪಾಲಿಸಲು ಸೂಚಿಸಲಾಗಿದೆ. ಶೇ.2 ಕ್ಕಿಂತ ಹೆಚ್ಚು ಪಾಸಿಟಿವಿಟಿ ಕಂಡುಬಂದರೆ ಶಾಲೆ ಮುಚ್ಚಿ ಕ್ರಮ ವಹಿಸಲಾಗುತ್ತದೆ" ಎಂದು ತಿಳಿಸಿದರು.

ಕಾರ್ಯಕ್ರಮ, ಸಮಾರಂಭಗಳನ್ನು ಮಾಡಬೇಕೆನ್ನುವುದು ಎಲ್ಲರಿಗೂ ಇದೆ. ಆದರೆ ಕೋವಿಡ್ ಸುರಕ್ಷತಾ ಕ್ರಮಗಳನ್ನು ಎಲ್ಲರೂ ಪಾಲಿಸಲೇಬೇಕು. ಕೋವಿಡ್ ತಡೆಗೆ ತಾಂತ್ರಿಕ ಸಲಹಾ ಸಮಿತಿಯ ಸಲಹೆ, ಆರೋಗ್ಯ ಇಲಾಖೆಯ ಸಲಹೆಗಳನ್ನು ಸರ್ಕಾರಕ್ಕೆ ತಿಳಿಸಲಾಗಿದೆ. ಕೊರೊನಾ ನಿಯಂತ್ರಿಸುವ ಒಂದೇ ದೃಷ್ಟಿಯಿಂದ ನಾವು ನೋಡುತ್ತಿದ್ದೇವೆ. ಮುಖ್ಯಮಂತ್ರಿಗಳು ಎಲ್ಲಾ ದೃಷ್ಟಿಕೋನದಿಂದ ನೋಡಿ ತೀರ್ಮಾನ ಕೈಗೊಳ್ಳಲಿದ್ದಾರೆ" ಎಂದು ಸಚಿವ ಸುಧಾಕರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT