ಆರೋಪಿಗಳನ್ನು ಸ್ಥಳಕ್ಕೆ ಕರೆದುಕೊಂಡುಹೋಗಿರುವ ಪೊಲೀಸರು 
ರಾಜ್ಯ

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧ ನಡೆದ ಸ್ಥಳಕ್ಕೆ ಆರೋಪಿಗಳ ಕರೆದೊಯ್ದ ಪೊಲೀಸರು, ಪರಿಶೀಲನೆ

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿರುವ ಆರೋಪಿಗಳನ್ನು ಅತ್ಯಾಚಾರ ನಡೆದ ಸ್ಥಳಕ್ಕೆ ಕರೆತಂದ ಪೊಲೀಸರು, ಸೋಮವಾರ ಸ್ಥಳ ಮಹಜರು ನಡೆಸಿದರು.

ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿರುವ ಆರೋಪಿಗಳನ್ನು ಅತ್ಯಾಚಾರ ನಡೆದ ಸ್ಥಳಕ್ಕೆ ಕರೆತಂದ ಪೊಲೀಸರು, ಸೋಮವಾರ ಸ್ಥಳ ಮಹಜರು ನಡೆಸಿದರು.

ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದ ಸ್ಥಳಕ್ಕೆ ನಿನ್ನೆಸಂಜೆ 5.30ರ ಸುಮಾರಿಗೆ ಪೊಲೀಸರು ಆರೋಪಿಗಳನ್ನು ಕರೆತಂದು ಮಹಜರು ನಡೆಸಿದರು. 

ಅತ್ಯಾಚಾರ ಪ್ರಕರಣ ಸಂಬಂಧ ತಮಿಳುನಾಡಿನಲ್ಲಿ ಅಡಗಿ ಕುಳಿತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿ ಶನಿವಾರ ಕರೆತಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ವಶಕ್ಕೆ ಪಡೆದಿದ್ದರು. 

ಇದೇ ವೇಳೆ ಆರೋಪಿಗಳ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಯಿತು. ಡಿಎನ್'ಎ ಪರೀಕ್ಷೆಗಾಗಿ ಆರೋಪಿಗಳ ಕೂದಲು, ಚರ್ಮದ ಮಾದರಿಗಳನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಯಿತು. ಈ ನಡುವೆ ಐವರು ಆರೋಪಿಗಳ ಪೈಕಿ ಓರ್ವ ಅಪ್ರಾಪ್ತನಾಗಿರುವ ಹಿನ್ನೆಲೆಯಲ್ಲಿ ಆತನನ್ನು ವೈದ್ಯಕೀಯ ಪರೀಕ್ಷೆ ಅಥವಾ ಪೊಲೀಸರ ತಪಾಸಣೆ ನಡೆಸಲಾಗಲಿಲ್ಲ. ಆತನ ವಯಸ್ಸು ಕುರಿತು ಪೊಲೀಸರು ದಾಖಲೆಗಳನ್ನು ಸಂಗ್ರಹಿಸಬೇಕಾಗಿದೆ. 

ಪ್ರಕರಣದ ತನಿಖೆ ವೇಳೆ ಅಪರಾಧ ಕೃತ್ಯದಲ್ಲಿ 6 ಮಂದಿಯಲ್ಲ 7 ಮಂದಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. 

ಓರ್ವ ಆರೋಪಿ ತಮಿಳುನಾಡಿನ ಸುಸೈಪುರಂ ನಿವಾಸಿಯಾಗಿದ್ದು, ಈತ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಈ ಹಿಂದೆ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲೂ ನಜರ್ಬಾದ್ ಪೊಲೀಸರು ಈತನನ್ನು ಬಂಧನಕ್ಕೊಳಪಡಿಸಿದ್ದರೆಂದು ತಿಳಿದುಬಂದಿದೆ. 

ಇದಲ್ಲದೆ, ಅಂತರ್ ರಾಜ್ಯ ಸ್ಮಗ್ಲಿಂಗ್ ಪ್ರಕರಣದಲ್ಲೂ ಈತ ಹಾಗೂ ಈತನ ಜೊತೆಗಿದ್ದ ಮೂವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದರು. ಆದರೆ, ಜಾಮೀನಿನ ಮೇರೆಗೆ ಈತ ಹೊರ ಬಂದಿದ್ದ. ಇದಾದ ಬಳಿಕ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT