ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಆಟೋ ಪರಿಷ್ಕೃತ ದರ ಇಂದಿನಿಂದ ಜಾರಿ, ನೂತನ ದರ ಎಷ್ಟು?

ರಾಜಧಾನಿ ಬೆಂಗಳೂರಿನಲ್ಲಿ ಆಟೋದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಇನ್ನು ಮುಂದೆ ಹೆಚ್ಚಿನ ದರ ನೀಡಲು ಸಜ್ಜಾಗಿರಿ. ನಗರದಲ್ಲಿ ಆಟೋ ಪ್ರಯಾಣ ದರ (Auto Fare) ಹೆಚ್ಚಳವಾಗುತ್ತಿದ್ದು ಪರಿಷ್ಕೃತ ದರ ಇಂದು(ಡಿಸೆಂಬರ್ 1) ಬುಧವಾರದಿಂದಲೇ ಜಾರಿಗೆ ಬರುತ್ತಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಟೋದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಇನ್ನು ಮುಂದೆ ಹೆಚ್ಚಿನ ದರ ನೀಡಲು ಸಜ್ಜಾಗಿರಿ. ನಗರದಲ್ಲಿ ಆಟೋ ಪ್ರಯಾಣ ದರ (Auto Fare) ಹೆಚ್ಚಳವಾಗುತ್ತಿದ್ದು ಪರಿಷ್ಕೃತ ದರ ಇಂದು(ಡಿಸೆಂಬರ್ 1) ಬುಧವಾರದಿಂದಲೇ ಜಾರಿಗೆ ಬರುತ್ತಿದೆ.

ನೂತನ ದರ ಹೇಗಿದೆ?: ಒಂಭತ್ತು ವರ್ಷಗಳ ಬಳಿಕ ಆಟೋದರ ಪರಿಷ್ಕರಣೆಯಾಗುತ್ತಿದೆ. ಮೊದಲ 2 ಕಿಲೋ ಮೀಟರ್ ವರೆಗೆ ಕನಿಷ್ಠ ಪ್ರಯಾಣ ದರ (Minimum Charge) 25ರೂಪಾಯಿಯಿಂದ 30 ರೂಪಾಯಿಗೆ ಏರಿಕೆಯಾಗಿದೆ. ಕನಿಷ್ಠ ಪ್ರಯಾಣ ದರದ ನಂತರದ ಪ್ರತಿ ಕಿಲೋ ಮೀಟರ್ ದರ 15 ರೂಪಾಯಿ ಹೆಚ್ಚಳವಾಗಲಿದೆ.

ಕಾಯುವಿಕೆಯ ದರ (Waiting Charge) ಮೊದಲ 5 ನಿಮಿಷ ಉಚಿತವಾಗಿರುತ್ತದೆ. ನಂತರ ಪ್ರತಿ ನಿಮಿಷಕ್ಕೆ 5 ರೂಪಾಯಿ ನಿಗದಿಗೊಳಿಸಲಾಗಿದೆ. ಪ್ರಯಾಣಿಕರ ಲಗೇಜು ದರ ಮೊದಲ 20 ಕೆ.ಜಿ.ಗೆ ಉಚಿತ. 20 ಕೆ.ಜಿ.ಯಿಂದ 50 ಕೆ.ಜಿ.ವರೆಗೆ 5  ರೂಪಾಯಿ ನಿಗದಿಪಡಿಸಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ಆಟೋ ಪ್ರಯಾಣ ದರ ಸಾಮಾನ್ಯ ದರ ಜತೆಗೆ ಅರ್ಧ ಪಟ್ಟು ಹೆಚ್ಚಳವಾಗುತ್ತದೆ. 

ದರದಲ್ಲಿ ಪರಿಷ್ಕರಣೆ ಹಿನ್ನೆಲೆಯಲ್ಲಿ ಆಟೋ ಚಾಲಕರು (Auto Drivers) ತಮ್ಮ ಆಟೋ ಮೀಟರ್‌ಗಳಿಗೆ ಬರುವ ಫೆಬ್ರವರಿ 28ರೊಳಗೆ ಸಾರಿಗೆ ಅಧಿಕಾರಿಗಳಿಂದ ಪ್ರಮಾಣೀಕರಿಸಿಕೊಂಡು ಮತ್ತೆ ಮುದ್ರೆ ಹಾಕಿಸಿಕೊಳ್ಳಬೇಕಾಗಿದೆ. ಪರಿಷ್ಕರಣೆ ದರ ಪ್ರಯಾಣಿಕರಿಂದ ನೋಡಲು ಸಿಗುವಂತೆ ಪ್ರದರ್ಶಿಸಬೇಕು. ರಾತ್ರಿ 10 ಗಂಟೆಯ ನಂತರ ಪ್ರಯಾಣ ಮಾಡುವವರು ಪ್ರಯಾಣ ವೆಚ್ಚದ ಒಂದೂವರೆ ಪಟ್ಟು ಪಾವತಿ ಮಾಡಬೇಕಾಗುತ್ತದೆ.

ಕಳೆದ ಬಾರಿ ಆಟೋದರ ಪರಿಷ್ಕರಣೆಯಾಗಿದ್ದು 2013 ರಲ್ಲಿ 1.9 ಕಿಲೋ ಮೀಟರ್ ಗೆ ಕನಿಷ್ಟ ಪ್ರಯಾಣ ದರ 20 ರಿಂದ 25 ರೂಪಾಯಿಗೆ ಹೆಚ್ಚಳವಾಗಿತ್ತು.  2019 ರಲ್ಲಿ ದರ ಹೆಚ್ಚಳ ಮಾಡುವಂತೆ ಮನವಿ ಮಾಡಲಾಗಿತ್ತು. ಆದರೆ ಆಟೋ ದರ ಹೆಚ್ಚಳಕ್ಕೆ ಸರ್ಕಾರ ಅನುಮತಿ ನೀಡಿರಲಿಲ್ಲ.  ಈಗ ತೈಲ ಹಾಗೂ ಗ್ಯಾಸ್ ದರ ಹೆಚ್ಚಳ ಬೆನ್ನಲ್ಲೇ ದರ ಪರಿಷ್ಕರಣೆ ಮಾಡುವಂತೆ ಆಟೋ ಚಾಲಕರು ಮನವಿ ಮಾಡಿದ್ದರು.

ಬೆಂಗಳೂರಿನಲ್ಲಿ ಪ್ರತಿನಿತ್ಯ ಲಕ್ಷಾಂತರ ಮಂದಿ ಆಟೋದಲ್ಲಿ ಪ್ರಯಾಣಿಸುತ್ತಾರೆ, ಸಾವಿರಾರು ಮಂದಿ ಆಟೋ ಚಾಲಕರು ಆಟೋ ಚಲಾಯಿಸಿ ಜೀವನ ಸಾಗಿಸುತ್ತಾರೆ. ಇದೀಗ ಆಟೋ ದರ ಹೆಚ್ಚಳವಾಗಿದ್ದು, ಜನಸಾಮಾನ್ಯರ ಜೀವನದ ಮೇಲೆ ಮತ್ತೊಂದು ದರ ಏರಿಕೆ ಬಿಸಿ ತಟ್ಟಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT