ಸಾಂದರ್ಭಿಕ ಚಿತ್ರ 
ರಾಜ್ಯ

ಶವಾಗಾರದಲ್ಲಿ ಕೊಳೆತ ಸ್ಥಿತಿಯಲ್ಲಿ ಇಬ್ಬರು ಕೋವಿಡ್ ಸೋಂಕಿತರ ಶವ ಪತ್ತೆ ಪ್ರಕರಣ: ಬೆಂಗಳೂರಿನ ಇಎಸ್ಐ ಆಸ್ಪತ್ರೆಯ ಡೀನ್ ಎತ್ತಂಗಡಿ

ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯ ಶವಾಗಾರದಲ್ಲಿ 16 ತಿಂಗಳ ಹಿಂದೆ ಮೃತಪಟ್ಟ ಇಬ್ಬರು ಕೋವಿಡ್ ಸೋಂಕಿತರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಆಸ್ಪತ್ರೆಯ ಡೀನ್...

ಬೆಂಗಳೂರು: ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯ ಶವಾಗಾರದಲ್ಲಿ 16 ತಿಂಗಳ ಹಿಂದೆ ಮೃತಪಟ್ಟ ಇಬ್ಬರು ಕೋವಿಡ್ ಸೋಂಕಿತರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಆಸ್ಪತ್ರೆಯ ಡೀನ್ ಡಾ.ಜೀತೇಂದ್ರಕುಮಾರ್ ಅವರನ್ನು ಎತ್ತಂಗಡಿ ಮಾಡಲಾಗಿದೆ.

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಬರುವ ನೌಕರರ ರಾಜ್ಯ ವಿಮಾ ನಿಗಮವು ಡೀನ್‌ ಡಾ.ಜೀತೇಂದ್ರಕುಮಾರ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ನಿರ್ದೇಶಕಿ, ಪ್ರಾಧ್ಯಾಪಕಿ ಡಾ.ರೇಣುಕಾ ರಾಮಯ್ಯ ಅವರನ್ನು ಪ್ರಭಾರಿ ಡೀನ್ ಆಗಿ ನೇಮಿಸಲಾಗಿದೆ.

ಆಸ್ಪತ್ರೆಯ ನಿರ್ಲಕ್ಷ್ಯದಿಂದಾಗಿ, ಜುಲೈ 2020ರಲ್ಲಿ ನಿಧನರಾಗಿದ್ದ ಇಬ್ಬರು COVID-19 ರೋಗಿಗಳ ಶವಗಳನ್ನು ವಿಲೇವಾರಿ ಮಾಡದೆ ಶವಗಾರದಲ್ಲಿಯೇ ಬಿಡಲಾಗಿದೆ ಎಂದು ನವೆಂಬರ್ 29 ರಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಆ ಸಮಯದಲ್ಲಿ ಅನೇಕ ಕೋವಿಡ್ ಶವಗಳು ಇದ್ದ ಕಾರಣ, ಅವುಗಳನ್ನು ಹೊಸ ಶವಾಗಾರಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಯಿತು. ಬಳಿಕ ಆಸ್ಪತ್ರೆಯ ಆಕ್ಸಿಜನ್ ಗ್ಯಾಸ್ ಪೈಪ್ ಲೈನ್ ಬಳಿ ಇದ್ದ ಹಳೆಯ ಶವಾಗಾರವನ್ನು ಮುಚ್ಚಲಾಯಿತು. ಈ ವೇಳೆ ಶವಾಗಾರದೊಳಗೆ ಇದ್ದ ಎರಡು ಶವಗಳನ್ನು ವಿಲೇವಾರಿ ಮಾಡಲು ಸಂಬಂಧಪಟ್ಟ ಆಸ್ಪತ್ರೆಯ ಅಧಿಕಾರಿಗಳು ಮರೆತಿದ್ದಾರೆ ಎಂದು ಸಿಬ್ಬಂದಿಯೊಬ್ಬರು ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT