ಸಾಂದರ್ಭಿಕ ಚಿತ್ರ 
ರಾಜ್ಯ

ಶವಾಗಾರದಲ್ಲಿ ಕೊಳೆತ ಸ್ಥಿತಿಯಲ್ಲಿ ಇಬ್ಬರು ಕೋವಿಡ್ ಸೋಂಕಿತರ ಶವ ಪತ್ತೆ ಪ್ರಕರಣ: ಬೆಂಗಳೂರಿನ ಇಎಸ್ಐ ಆಸ್ಪತ್ರೆಯ ಡೀನ್ ಎತ್ತಂಗಡಿ

ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯ ಶವಾಗಾರದಲ್ಲಿ 16 ತಿಂಗಳ ಹಿಂದೆ ಮೃತಪಟ್ಟ ಇಬ್ಬರು ಕೋವಿಡ್ ಸೋಂಕಿತರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಆಸ್ಪತ್ರೆಯ ಡೀನ್...

ಬೆಂಗಳೂರು: ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯ ಶವಾಗಾರದಲ್ಲಿ 16 ತಿಂಗಳ ಹಿಂದೆ ಮೃತಪಟ್ಟ ಇಬ್ಬರು ಕೋವಿಡ್ ಸೋಂಕಿತರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಆಸ್ಪತ್ರೆಯ ಡೀನ್ ಡಾ.ಜೀತೇಂದ್ರಕುಮಾರ್ ಅವರನ್ನು ಎತ್ತಂಗಡಿ ಮಾಡಲಾಗಿದೆ.

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಬರುವ ನೌಕರರ ರಾಜ್ಯ ವಿಮಾ ನಿಗಮವು ಡೀನ್‌ ಡಾ.ಜೀತೇಂದ್ರಕುಮಾರ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ನಿರ್ದೇಶಕಿ, ಪ್ರಾಧ್ಯಾಪಕಿ ಡಾ.ರೇಣುಕಾ ರಾಮಯ್ಯ ಅವರನ್ನು ಪ್ರಭಾರಿ ಡೀನ್ ಆಗಿ ನೇಮಿಸಲಾಗಿದೆ.

ಆಸ್ಪತ್ರೆಯ ನಿರ್ಲಕ್ಷ್ಯದಿಂದಾಗಿ, ಜುಲೈ 2020ರಲ್ಲಿ ನಿಧನರಾಗಿದ್ದ ಇಬ್ಬರು COVID-19 ರೋಗಿಗಳ ಶವಗಳನ್ನು ವಿಲೇವಾರಿ ಮಾಡದೆ ಶವಗಾರದಲ್ಲಿಯೇ ಬಿಡಲಾಗಿದೆ ಎಂದು ನವೆಂಬರ್ 29 ರಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಆ ಸಮಯದಲ್ಲಿ ಅನೇಕ ಕೋವಿಡ್ ಶವಗಳು ಇದ್ದ ಕಾರಣ, ಅವುಗಳನ್ನು ಹೊಸ ಶವಾಗಾರಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಯಿತು. ಬಳಿಕ ಆಸ್ಪತ್ರೆಯ ಆಕ್ಸಿಜನ್ ಗ್ಯಾಸ್ ಪೈಪ್ ಲೈನ್ ಬಳಿ ಇದ್ದ ಹಳೆಯ ಶವಾಗಾರವನ್ನು ಮುಚ್ಚಲಾಯಿತು. ಈ ವೇಳೆ ಶವಾಗಾರದೊಳಗೆ ಇದ್ದ ಎರಡು ಶವಗಳನ್ನು ವಿಲೇವಾರಿ ಮಾಡಲು ಸಂಬಂಧಪಟ್ಟ ಆಸ್ಪತ್ರೆಯ ಅಧಿಕಾರಿಗಳು ಮರೆತಿದ್ದಾರೆ ಎಂದು ಸಿಬ್ಬಂದಿಯೊಬ್ಬರು ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT