ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ 
ರಾಜ್ಯ

ಎಸ್‌ಡಿಎಮ್ ಆಸ್ಪತ್ರೆಯ 500 ಮೀಟರ್ ವ್ಯಾಪ್ತಿ ಸೀಲ್ ಡೌನ್: ಧಾರವಾಡ ಜಿಲ್ಲಾಧಿಕಾರಿ ಸ್ಪಷ್ಟೀಕರಣ

ಧಾರವಾಡದ ಎಸ್.ಡಿ.ಎಮ್. ಮಹಾವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಮತ್ತು ವೈದ್ಯರಲ್ಲಿ ಕೋವಿಡ್ ಪ್ರಕರಣಗಳು ಪತ್ತೆ ಆಗಿದ್ದರಿಂದ ಕಳೆದ ನ.25 ರಿಂದ ಎಸ್.ಡಿ.ಎಮ್. ಮಹಾವಿದ್ಯಾಲಯ ಬಂದ್ ಮಾಡಲಾಗಿದೆ.

ಧಾರವಾಡ: ಧಾರವಾಡದ ಎಸ್.ಡಿ.ಎಮ್. ಮಹಾವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಮತ್ತು ವೈದ್ಯರಲ್ಲಿ ಕೋವಿಡ್ ಪ್ರಕರಣಗಳು ಪತ್ತೆ ಆಗಿದ್ದರಿಂದ ಕಳೆದ ನ.25 ರಿಂದ ಎಸ್.ಡಿ.ಎಮ್. ಮಹಾವಿದ್ಯಾಲಯ ಬಂದ್ ಮಾಡಲಾಗಿದೆ.

ಸೋಂಕಿತ ವಿದ್ಯಾರ್ಥಿಗಳು ಇರುವ ಎರಡು ವಸತಿ ನಿಲಯಗಳನ್ನು ಮಾತ್ರ ನಿಯಮಾನುಸಾರ ಸೀಲ್ ಡೌನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಣೆ ನೀಡಿರುವ ಜಿಲ್ಲಾಧಿಕಾರಿಗಳು, ಮಕ್ಕಳ, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಎಸ್.ಡಿ.ಎಮ್.ಆಸ್ಪತ್ರೆಯ ಸಮೀಪದಲ್ಲಿರುವ ಅಂಗನವಾಡಿ, ಶಾಲೆ,ಕಾಲೇಜುಗಳಿಗೆ ಡಿ.1ರವರೆಗೆ ತರಗತಿಗಳನ್ನು ನಡೆಸದಂತೆ, ತೆರೆಯದಂತೆ ಸೂಚಿಸಲಾಗಿದೆ.

ಆದರೆ ಜಿಲ್ಲಾಡಳಿತದಿಂದ ಯಾವುದೇ ಇತರ ಪ್ರದೇಶ ಅಥವಾ 500 ಮೀಟರ್ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಿದ ಕುರಿತು ಆದೇಶ ಹೊರಡಿಸಿರುವದಿಲ್ಲ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಹಾಗೂ ಕೋವಿಡ್ ಸೋಂಗು ಹರಡದಂತೆ ತಡೆಯಲು ಎಸ್.ಡಿ.ಎಮ್.ಆಸ್ಪತ್ರೆಯ ಹೊರ ರೋಗಿಗಳ ಚಿಕಿತ್ಸಾ ವಿಭಾಗವನ್ನು ಮತ್ತು ಹೊಸ ಪೆಸೆಂಟ್ ದಾಖಲಾತಿಯನ್ನು ಕೆಲವು ದಿನಗಳ ಕಾಲ ನಿಲ್ಲಿಸಲಾಗಿದೆ. ಉಳಿದಂತೆ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆ, ಉದ್ಯಮಗಳನ್ನು ತೆರೆಯಲು ಅನುಮತಿಸಲಾಗಿದೆ ಎಂದು ತಿಳಿಸಿದ್ದಾರೆ.

ಧಾರವಾಡದ ಎಸ್​ಡಿಎಂ ಆಸ್ಪತ್ರೆಯ ಸುತ್ತಲಿನ ಶಾಲಾ ಕಾಲೇಜುಗಳು ಮತ್ತೆ ನಾಳೆಯಿಂದ ಆರಂಭ ಮಾಡುತ್ತೇವೆ. ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳಿಗೆ ನಿರ್ಬಂದ ಹೇರುವುದಿಲ್ಲ. ಮತ್ತು ನಿರ್ಬಂಧ ಹೇರಲು ಅವಕಾಶವೂ ಇಲ್ಲ’’ ಎಂದು ಅವರು ಹೇಳಿದ್ದಾರೆ. ಧಾರವಾಡದಲ್ಲಿ ಕೊರೊನಾ ಟೆಸ್ಟ್ ಮಾಡುತ್ತಿರುವುದರ ಕುರಿತು ಮಾತನಾಡಿರುವ ಅವರು, ‘‘ಧಾರವಾಡ ಜಿಲ್ಲೆಯಲ್ಲಿ ಪ್ರತಿನಿತ್ಯ ೫ ಸಾವಿರ ಜನರಿಗೆ ಟೆಸ್ಟ್ ಮಾಡುತ್ತಿದ್ದೇವೆ’’ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

SCROLL FOR NEXT