ಸಂಗ್ರಹ ಚಿತ್ರ 
ರಾಜ್ಯ

ಜಾರಕಿಹೊಳಿ ಸಿಡಿ ಕೇಸ್: ತನಿಖಾಧಿಕಾರಿ ವರದಿಗೆ ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಅಸ್ತು

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿ ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳದ (ಎಸ್ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರು ಎಸ್ಐಟಿ ವರದಿಯನ್ನು ಒಪ್ಪಿಕೊಂಡಿದ್ದಾರೆ.

ಬೆಂಗಳೂರು: “ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿ ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳದ (ಎಸ್ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರು ಎಸ್ಐಟಿ ವರದಿಯನ್ನು ಒಪ್ಪಿಕೊಂಡಿದ್ದಾರೆ.

ಈ ಸಂಬಂಧ ಅವರು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿರುವ ವರದಿಯನ್ನು ನ್ಯಾಯಾಲಯವು ಪರಿಶೀಲಿಸಿದೆ. ಸದರಿ ವರದಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸುವ ಸಂಬಂಧ ಎಸ್ಐಟಿಯು ಹೈಕೋರ್ಟ್ಗೆ ಮನವಿ ಸಲ್ಲಿಸಬಹುದಾಗಿದೆ. ಈ ಮನವಿಯನ್ನು ನ್ಯಾಯಾಲಯವು ಪರಿಗಣಿಸಲಿದೆ” ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಹೇಳಿದೆ.

ಎಸ್ಐಟಿ ರಚನೆಯ ಸಾಂವಿಧಾನಿಕ ಸಿಂಧುತ್ವ ಸೇರಿದಂತೆ ವಿವಿಧ ಕೋರಿಕೆಗಳನ್ನು ಒಳಗೊಂಡು ಸಂತ್ರಸ್ತೆ ಮತ್ತು ಇತರರು ಸಲ್ಲಿಸಿರುವ ಸಂಬಂಧಿತ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಎಸ್ಐಟಿ ಸಿದ್ಧಪಡಿಸಿರುವ ವರದಿಯನ್ನು ಮುಖ್ಯಸ್ಥ ಸೌಮೇಂದು ಮುಖರ್ಜಿ ಪರಿಶೀಲಿಸಿ, ಒಪ್ಪಿಕೊಂಡಿದ್ದಾರೆಯೇ ಎಂದು ತಿಳಿಸುವಂತೆ ಕಳೆದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಎಸ್ಐಟಿಗೆ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ “ನವೆಂಬರ್ 26ರಂದು ಸೌಮೇಂದು ಮುಖರ್ಜಿ ಅವರು ಎಸ್ಐಟಿ ವರದಿಯನ್ನು ಅನುಮೋದಿಸಿದ್ದಾರೆ ಎಂದು ಎಸ್ಐಟಿ ಪರ ವಕೀಲ ಪಿ ಪ್ರಸನ್ನಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ಎಸ್ಐಟಿ ಮುಖ್ಯಸ್ಥರು ಮುಚ್ಚಿದ ಲಕೋಟೆಯಲ್ಲಿ ನೀಡಿರುವ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ” ಎಂದು ಪೀಠವು ಆದೇಶದಲ್ಲಿ ದಾಖಲಿಸಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT