ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಕೊರೋನಾ ನಿಯಂತ್ರಣಕ್ಕೆ ಕಠಿಣ ಕ್ರಮ ಅನಿವಾರ್ಯ, ಲಾಕ್ ಡೌನ್ ಹೇರುವುದಿಲ್ಲ; ನಾಳೆ ದೆಹಲಿಗೆ: ಸಿಎಂ ಬೊಮ್ಮಾಯಿ

ಕೊರೋನಾ ಸೋಂಕು ನಿಯಂತ್ರಿಸಲು ರಾಜ್ಯದಲ್ಲಿ ವಿಶೇಷವಾಗಿ ಗಡಿಭಾಗಗಳಲ್ಲಿ ಕಠಿಣ ನಿಯಮ ತರುವ ಅನಿವಾರ್ಯತೆಯಿದೆ ಎಂದು ಹೇಳುವ ಮೂಲಕ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ತರುವ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ: ಕೊರೋನಾ ಸೋಂಕು ನಿಯಂತ್ರಿಸಲು ರಾಜ್ಯದಲ್ಲಿ ವಿಶೇಷವಾಗಿ ಗಡಿಭಾಗಗಳಲ್ಲಿ ಕಠಿಣ ನಿಯಮ ತರುವ ಅನಿವಾರ್ಯತೆಯಿದೆ ಎಂದು ಹೇಳುವ ಮೂಲಕ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ತರುವ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಾಳೆ ದೆಹಲಿಗೆ ಹೋಗುತ್ತಿದ್ದು ಅಲ್ಲಿ ಆರೋಗ್ಯ ಸಚಿವರ ಜೊತೆ ಮಾತುಕತೆ ನಡೆಸಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ನಿಯಮ ಜಾರಿಗೆ ತರಲಾಗುವುದು. ಆರೋಗ್ಯ ಇಲಾಖೆ ಮತ್ತು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ ಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ವೈಜ್ಞಾನಿಕ ಪ್ರಗತಿ ಮತ್ತು ಕೇಂದ್ರ ಸರ್ಕಾರದ ಅನಿಸಿಕೆ, ಶಿಫಾಸಲು ಏನಿದೆ ಎಂದು ಚರ್ಚೆ ಮಾಡುತ್ತೇನೆ ಎಂದರು.

ಲಾಕ್ ಡೌನ್ ಇಲ್ಲ: ಕೋವಿಡ್ ಒಂದನೇ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಲಾಕ್ ಡೌನ್ ಹೇರಿಕೆ ಮಾಡಿ ಈಗಾಗಲೇ ಜನಸಾಮಾನ್ಯರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಎರಡನೇ ಅಲೆ ತಗ್ಗಿದ ನಂತರ ಜನಜೀವನ ಸಹಜ ಸ್ಥಿತಿಗೆ ಬರುತ್ತಿರುವ ಸಂದರ್ಭದಲ್ಲಿ ಮತ್ತೆ ಲಾಕ್ ಡೌನ್ ಹೇರಿಕೆ ಮಾಡಿದರೆ ಕಷ್ಟವಾಗುತ್ತದೆ. ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ, ಲಾಕ್ ಡೌನ್ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಈಗಿರುವ ಸೋಂಕಿನ ತೀವ್ರತೆಯನ್ನು ತಿಳಿದುಕೊಂಡು ಏನೇನು ಮಾರ್ಗಸೂಚಿ ಮತ್ತು ನಿಯಮ ಹೇರಬೇಕೆಂದು ಚಿಂತಿಸಲಾಗುವುದು. ಯಾರೂ ಗಾಬರಿಗೊಳಗಾಗುವುದು ಬೇಡ ಎಂದರು.

ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟು: ಆರಂಭದಲ್ಲಿ ಜನರಿಗೆ ಸ್ವಲ್ಪ ಕಷ್ಟವಾದರೂ ಪರವಾಗಿಲ್ಲ, ಆರೋಗ್ಯ ಸಚಿವರಿಗೆ ಈ ಬಗ್ಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಸೋಂಕು ಹಬ್ಬುವ ಮೊದಲು ತಡೆಯುವುದು ಉತ್ತಮ ಎಂದರು.

ರಾಜ್ಯದೊಳಗೆ ಸೋಂಕು ಇರುವವರು ಬಂದು ಹಬ್ಬಿದ ನಂತರ ಅವರನ್ನು ಪತ್ತೆಹಚ್ಚುವುದು ಕಷ್ಟವಾಗುವ ಮೊದಲು ಈಗಲೇ ಕಠಿಣ ಕ್ರಮ ತೆಗೆದುಕೊಳ್ಳುವುದು ಮುಖ್ಯ. ಏರ್ ಪೋರ್ಟ್, ಗಡಿಗಳಲ್ಲಿ ಕೋವಿಡ್ ತಪಾಸಣೆ ಕಟ್ಟುನಿಟ್ಟಾಗಿ ಮಾಡಲಾಗುವುದು ಎಂದರು.

ಬೆಂಗಳೂರು ಏರ್ ಪೋರ್ಟ್ ಗೆ ಪ್ರತಿದಿನ ಸುಮಾರು 2ರಿಂದ ಎರಡೂವರೆ ಸಾವಿರ ಜನ ಬರುತ್ತಾರೆ. ಮಂಗಳೂರು ಏರ್ ಪೋರ್ಟ್ ಗೂ ಹೊರಗಿನಿಂದ ಸಾಕಷ್ಟು ಜನ ಬರುತ್ತಾರೆ, ಅವರೆಲ್ಲರನ್ನೂ ಟೆಸ್ಟ್ ಮಾಡಬೇಕು. ಕಳೆದ ಬಾರಿ ಸರಿಯಾಗಿ ಟೆಸ್ಟ್ ಮಾಡಿಸದೆ ಒಳಗೆ ಬಂದ ಮೇಲೆ ಸೋಂಕು ಹರಡಿದ್ದನ್ನು ನೋಡಿ ಅನುಭವವಿದೆ ಎಂದರು.

ನಾಳೆ ದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ವಿಶೇಷವಾಗಿ ಆರೋಗ್ಯ ಮತ್ತು ಫ್ರಂಟ್ ಲೈನ್ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಚರ್ಚಿಸುತ್ತೇನೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT