ಕುನಾಲ್ ಕಾಮ್ರಾ 
ರಾಜ್ಯ

ಮತ್ತೋರ್ವ ಜನಪ್ರಿಯ ಸ್ಟ್ಯಾಂಡಪ್ ಕಮೀಡಿಯನ್ ಕುನಾಲ್ ಕಾಮ್ರಾ ಬೆಂಗಳೂರು ಕಾರ್ಯಕ್ರಮ ರದ್ದು

ಕುನಾಲ್ ಕಾಮ್ರಾ ಅವರ ಕಾರ್ಯಕ್ರಮ ಜೆ.ಪಿ. ನಗರದಲ್ಲಿ ಆಯೋಜನೆಯಾಗಿತ್ತು. ಅಲ್ಲಿನ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು: ಸ್ಟಾಂಡಪ್ ಕಮೀಡಿಯನ್ ಮುನಾವರ್ ಫರೂಕಿ ಹಾಸ್ಯ ಕಾರ್ಯಕ್ರಮ ರದ್ದುಗೊಂಡ ಬೆನ್ನಲ್ಲೇ ಬೆಂಗಳೂರಿನಲ್ಲಿ ಆಯೋಜನೆಯಾಗಿದ್ದ ಮತ್ತೋರ್ವ ಜನಪ್ರಿಯ ಕಮೀಡಿಯನ್ ಕುನಾಲ್ ಕಾಮ್ರಾ ಅವರ ಕಾರ್ಯಕ್ರಮವೂ ರದ್ದಾಗಿದೆ. 

ಕುನಾಲ್ ಕಾಮ್ರಾ ಅವರ ಕಾರ್ಯಕ್ರಮ ಜೆ.ಪಿ. ನಗರದಲ್ಲಿ ಆಯೋಜನೆಯಾಗಿತ್ತು. ಅಲ್ಲಿನ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. 

ಕಾರ್ಯಕ್ರಮ ರದ್ದಾಗಿರುವ ಹಿಂದೆ ತಮ್ಮ ಪಾತ್ರವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನಿವಾಸಿಗಳ ವಿರೋಧದಿಂದಾಗಿ ಕಾರ್ಯಾಕ್ರಮ ಆಯೋಜಕರೇ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. 

ಘಟನೆ ಬಗ್ಗೆ ಕುನಾಲ್ ಕಾಮ್ರಾ ಟ್ವೀಟ್ ಮಾಡಿದ್ದು, ತಾವು ಕಾರ್ಯಕ್ರಮ ನೀಡಿದರೆ ಆಯೋಜಕರಿಗೆ ತೊಂದರೆ ಉಂಟುಮಾಡುವುದಾಗಿ ಬೆದರಿಕೆ ಕೇಳಿಬಂದಿದ್ದರಿಂದ ಆಯೋಜಕರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದಿದ್ದಾರೆ.

ಅಲ್ಲದೆ ಕೊರೊನಾ ಪರಿಸ್ಥಿತಿಯೂ ಇದಕ್ಕೆ ಕಾರಣವಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ತಮ್ಮನ್ನೂ ಕೊರೊನಾ ವೈರಸ್ ತಳಿ ಎಂದು ಕೆಲವರು ಭಾವಿಸಿದಂತಿದೆ ಎಂದು ಅವರು ಅಣಕವಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

SCROLL FOR NEXT