ಕುನಾಲ್ ಕಾಮ್ರಾ 
ರಾಜ್ಯ

ಮತ್ತೋರ್ವ ಜನಪ್ರಿಯ ಸ್ಟ್ಯಾಂಡಪ್ ಕಮೀಡಿಯನ್ ಕುನಾಲ್ ಕಾಮ್ರಾ ಬೆಂಗಳೂರು ಕಾರ್ಯಕ್ರಮ ರದ್ದು

ಕುನಾಲ್ ಕಾಮ್ರಾ ಅವರ ಕಾರ್ಯಕ್ರಮ ಜೆ.ಪಿ. ನಗರದಲ್ಲಿ ಆಯೋಜನೆಯಾಗಿತ್ತು. ಅಲ್ಲಿನ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. 

ಬೆಂಗಳೂರು: ಸ್ಟಾಂಡಪ್ ಕಮೀಡಿಯನ್ ಮುನಾವರ್ ಫರೂಕಿ ಹಾಸ್ಯ ಕಾರ್ಯಕ್ರಮ ರದ್ದುಗೊಂಡ ಬೆನ್ನಲ್ಲೇ ಬೆಂಗಳೂರಿನಲ್ಲಿ ಆಯೋಜನೆಯಾಗಿದ್ದ ಮತ್ತೋರ್ವ ಜನಪ್ರಿಯ ಕಮೀಡಿಯನ್ ಕುನಾಲ್ ಕಾಮ್ರಾ ಅವರ ಕಾರ್ಯಕ್ರಮವೂ ರದ್ದಾಗಿದೆ. 

ಕುನಾಲ್ ಕಾಮ್ರಾ ಅವರ ಕಾರ್ಯಕ್ರಮ ಜೆ.ಪಿ. ನಗರದಲ್ಲಿ ಆಯೋಜನೆಯಾಗಿತ್ತು. ಅಲ್ಲಿನ ನಗರದ ನಿವಾಸಿಗಳು ಪ್ರತಿಭಟನೆ ನಡೆಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. 

ಕಾರ್ಯಕ್ರಮ ರದ್ದಾಗಿರುವ ಹಿಂದೆ ತಮ್ಮ ಪಾತ್ರವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನಿವಾಸಿಗಳ ವಿರೋಧದಿಂದಾಗಿ ಕಾರ್ಯಾಕ್ರಮ ಆಯೋಜಕರೇ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. 

ಘಟನೆ ಬಗ್ಗೆ ಕುನಾಲ್ ಕಾಮ್ರಾ ಟ್ವೀಟ್ ಮಾಡಿದ್ದು, ತಾವು ಕಾರ್ಯಕ್ರಮ ನೀಡಿದರೆ ಆಯೋಜಕರಿಗೆ ತೊಂದರೆ ಉಂಟುಮಾಡುವುದಾಗಿ ಬೆದರಿಕೆ ಕೇಳಿಬಂದಿದ್ದರಿಂದ ಆಯೋಜಕರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದಿದ್ದಾರೆ.

ಅಲ್ಲದೆ ಕೊರೊನಾ ಪರಿಸ್ಥಿತಿಯೂ ಇದಕ್ಕೆ ಕಾರಣವಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ತಮ್ಮನ್ನೂ ಕೊರೊನಾ ವೈರಸ್ ತಳಿ ಎಂದು ಕೆಲವರು ಭಾವಿಸಿದಂತಿದೆ ಎಂದು ಅವರು ಅಣಕವಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT