ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ (ಸಂಗ್ರಹ ಚಿತ್ರ) 
ರಾಜ್ಯ

ಓಮಿಕ್ರಾನ್ ಭೀತಿ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ 10 ಮಂದಿ ದಕ್ಷಿಣ ಆಫ್ರಿಕಾ ಪ್ರಯಾಣಿಕರು ನಾಪತ್ತೆ!

ಬೆಂಗಳೂರಿನ ಮೂಲಕ ಭಾರತಕ್ಕೂ ಒಕ್ಕರಿಸಿರುವ ಓಮಿಕ್ರಾನ್ ರೂಪಾಂತರಿ ವೈರಸ್ ಭೀತಿ ವ್ಯಾಪಕವಾಗಿರುವಂತೆಯೇ ಇತ್ತ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ 10 ಮಂದಿ ದಕ್ಷಿಣ ಆಫ್ರಿಕಾ ಪ್ರಯಾಣಿಕರು ನಾಪತ್ತೆಯಾಗಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದೆ.

ಬೆಂಗಳೂರು: ಬೆಂಗಳೂರಿನ ಮೂಲಕ ಭಾರತಕ್ಕೂ ಒಕ್ಕರಿಸಿರುವ ಓಮಿಕ್ರಾನ್ ರೂಪಾಂತರಿ ವೈರಸ್ ಭೀತಿ ವ್ಯಾಪಕವಾಗಿರುವಂತೆಯೇ ಇತ್ತ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ 10 ಮಂದಿ ದಕ್ಷಿಣ ಆಫ್ರಿಕಾ ಪ್ರಯಾಣಿಕರು ನಾಪತ್ತೆಯಾಗಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದೆ.

ದಕ್ಷಿಣ ಆಫ್ರಿಕಾದಿಂದ ಈ ಪ್ರಯಾಣಿಕರು ನವೆಂಬರ್ 12 ಮತ್ತು 22 ರ ನಡುವೆ ಬೆಂಗಳೂರಿಗೆ ಬಂದಿದ್ದರು. ಆರೋಗ್ಯ ಇಲಾಖೆಯು ಅವರನ್ನು Covid-19 ಪರೀಕ್ಷೆಗೊಳಪಡಿಸಲು ಮುಂದಾಗಿದೆಯಾದರೂ, ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ, ಅವರ ಫೋನ್‌ಗಳು ಸ್ವಿಚ್ ಆಫ್ ಅಗಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅವರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ. 

ಈ ಕುರಿತು ಸ್ವತಃ ಆರೋಗ್ಯ ಸಚಿವ ಸುಧಾಕರ್ ಅವರೇ ಮಾಹಿತಿ ನೀಡಿದ್ದು, ನಮ್ಮ ಪೊಲೀಸ್ ವ್ಯವಸ್ಥೆ ಸಮರ್ಥವಾಗಿದೆ. ನಾಪತ್ತೆಯಾದವರ ಬಗ್ಗೆ ಶೀಘ್ರದಲ್ಲೇ ಮಾಹಿತಿ ಕಲೆಹಾಕುತ್ತೇವೆ ಎಂದು ಹೇಳಿದ್ದಾರೆ. ಇಂದು ಸುದ್ದಿಗಾರು ಕೇಳಿದ 10 ಮಂದಿ ನಾಪತ್ತೆಯಾದವರ ಕುರಿತು ಮಾತನಾಡಿದ ಅವರು, ಶೀಘ್ರದಲ್ಲೇ ನಾವು ಅವರನ್ನು ಪತ್ತೆ ಮಾಡುತ್ತೇವೆ. ನಾವು ಈ ಹಿಂದೆ ಇಂತಹ ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಿದ್ದೇವೆ. ಈಗ ಇದು ನಮಗೆ ಹೊಸದೇನೂ ಅಲ್ಲ. ಈ ಹಿಂದಿನ ಪರಿಸ್ಥಿತಿಗಳಲ್ಲಿ ನಾವು ಸಾವಿರಾರು ಮಂದಿಯನ್ನು ಪತ್ತೆ ಮಾಡಿದ್ದೇವೆ. ನಮ್ಮ ಪೊಲೀಸ್ ವ್ಯವಸ್ಥೆ ಅತ್ಯಂತ ಸಮರ್ಥವಾಗಿದೆ. ಈ ಕುರಿತು ಅವರಿಗೆ ಸಾಕಷ್ಟು ಅನುಭವವಿದೆ. ಕಳೆದ ವರ್ಷ ಇಂತಹ ಸಾಕಷ್ಟು ಪ್ರಕರಣಗಳನ್ನು ಅವರು ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದು  ಹೇಳಿದರು.

ಅಂತೆಯೇ ನಾಪತ್ತೆಯಾದವರ ಕುರಿತು ಮಾತನಾಡಿದ ಸುಧಾಕರ್ ಅವರು, ನಾನು ಈ ಮೂಲಕ ಅವರಿಗೆ ಹೇಳುವುದೇನೆಂದರೆ, ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಿ. ಪ್ರಸ್ತುತ ನಿಮಗೆ ಹೇಗೆಂದರೆ ಹಾಗೆ ತಿರುಗಾಡಲು ಸ್ವತಂತ್ರವಿಲ್ಲ. ನೈತಿಕವಾಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಿ.. ಸರ್ಕಾರದ ನಿಯಮಗಳು ಒಬ್ಬರಿಗೆ ತೊಂದರೆ ಮಾಡಲು ಅಲ್ಲ. ಬದಲಿಗೆ ಒಬ್ಬರಿಂದ ಹತ್ತಾರು ಮಂದಿ ಸಂಕಷ್ಟಕ್ಕೀಡಾಗಬಾರದು. ಪಾಸಿಟಿವ್ ಬಂದಾಕ್ಷಣ ಮೊಬೈಲ್ ಸ್ವಿಚ್ ಮಾಡಿ ಹೇಗೆಂದರೆ ಹಾಗೆ ತಿರುಗಾಡುವುದು ಸರಿಯಲ್ಲ. ಇದರಿಂದ ಬೇರೆಯವರಿಗೂ ಸೋಂಕು ಹರಡುತ್ತದೆ. ಇದರಿಂದ ನಿಮ್ಮ ಹತ್ತಿರಿದವರಿಗೂ, ಸಂಬಂಧಿಕರಿಗೂ ಸೋಂಕು ತಗುಲುವ ಅಪಾಯವಿದೆ. ಇಂತಹ ನಡೆ ಸರಿಯಲ್ಲ. ದಯಮಾಡಿ ನೀವೇ ಸ್ವಯಂ ಪ್ರೇರಿತರಾಗಿ ಬಂದು ಕ್ವಾರಂಟೈನ್ ಆಗಿ ಪರೀಕ್ಷೆಗೊಳಪಡಬೇಕು ಎಂದು ಮನವಿ ಮಾಡಿದ್ದಾರೆ.

ಕೋವಿಡ್ ಚಿಕಿತ್ಸೆ ನೀಡಲಾಗದ ಸಮಸ್ಯೆ ಅಲ್ಲ. ನಮಗೆ ಅತ್ಯಂತ ಅನುಭವಿ ವೈದ್ಯರ ನೆರವಿದೆ. ಸೂಕ್ತ ಚಿಕಿತ್ಸೆಗಳು ಲಭ್ಯವಿದೆ. ಸರ್ಕಾರ ನಿಮ್ಮೊಂದಿಗೆ ನೀವಾಗಿಯೇ ಮುಂದೆ ಬಂದು ಪರೀಕ್ಷೆಗೊಳಪಡಿ ಎಂದು ಸುಧಾಕರ್ ಮನವಿ ಮಾಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT