ಸಂಗ್ರಹ ಚಿತ್ರ 
ರಾಜ್ಯ

ಬಿಪಿಎಲ್ ಕುಟುಂಬಗಳಲ್ಲಿ ಯಾರೇ ಕೊರೋನಾದಿಂದ ಮೃತಪಟ್ಟರೂ 1 ಲಕ್ಷ ರೂ. ಪರಿಹಾರ: ರಾಜ್ಯ ಸರ್ಕಾರ ಆದೇಶ

ಡೆಲ್ಟಾ ರೂಪಾಂತರಿ ಮತ್ತು ಓಮಿಕ್ರಾನ್​ ಆತಂಕದ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಕೋವಿಡ್ ಸೋಂಕಿನಿಂದ ಬಿಪಿಎಲ್ ಕುಟುಂಬಗಳಲ್ಲಿ ಯಾರೇ ಮೃತಪಟ್ಟರೂ ರೂ.1 ಲಕ್ಷ ಪರಿಹಾರ ನೀಡಲು ಆದೇಶಿಸಿದೆ.

ಬೆಂಗಳೂರು: ಡೆಲ್ಟಾ ರೂಪಾಂತರಿ ಮತ್ತು ಓಮಿಕ್ರಾನ್​ ಆತಂಕದ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಕೋವಿಡ್ ಸೋಂಕಿನಿಂದ ಬಿಪಿಎಲ್ ಕುಟುಂಬಗಳಲ್ಲಿ ಯಾರೇ ಮೃತಪಟ್ಟರೂ ರೂ.1 ಲಕ್ಷ ಪರಿಹಾರ ನೀಡಲು ಆದೇಶಿಸಿದೆ.

ಕೊರೋನಾದಿಂದ ಮೃತಪಟ್ಟ ಬಡವರ ಕುಟುಂಬಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಹಿಂದೆ 1 ಲಕ್ಷ ರೂ. ಪರಿಹಾರ ಘೋಷಿಸಿತ್ತು. ಬಿಪಿಎಲ್  ಕಾರ್ಡ್​​ ಹೊಂದಿರುವ ಕುಟುಂಬದ ದುಡಿಯುವ ವ್ಯಕ್ತಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದರೆ, ಒಂದು ಕುಟುಂಬದಲ್ಲಿ ಆ ರೀತಿಯ ಒಬ್ಬರಿಗೆ ಮಾತ್ರ ಪರಿಹಾರ ನೀಡುವುದಾಗಿ ಈ ಮೊದಲು ತಿಳಿಸಿತ್ತು.

ಇದೀಗ ಈ ನಿಯಮಕ್ಕೆ ಬದಲಾವಣೆ ತರಲಾಗಿದ್ದು, ಬಿಪಿಎಲ್ ಕುಟುಂಬದ ಯಾವುದೇ ವ್ಯಕ್ತಿ ಕೊರೋನಾದಿಂದ ಮೃತರಾಗಿದ್ದರೆ, ಅವರ ಕುಟುಂಬಕ್ಕೆ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಲಾಗಿದೆ.

ಇದರೊಂದಿಗೆ ದುಡಿಯುತ್ತಿದ್ದ ವ್ಯಕ್ತಿಯ ಸಾವಿಗೆ ಮಾತ್ರ ಪರಿಹಾರ ಎಂಬ ನಿಬಂಧನೆಯನ್ನು ತೆಗೆದು ಹಾಕಲಾಗಿದ್ದು, ಇದೀಗ ಬಿಪಿಎಲ್ ಕುಟುಂಬದ ಯಾವುದೇ ಸದಸ್ಯ ಕೊರೋನಾದಿಂದ ಮೃತರಾಗಿದ್ದರೂ 1 ಲಕ್ಷ ರೂ. ಪರಿಹಾರ ನೀಡಲಾಗುವುದು. ಪರಿಹಾರ ನೀಡಲು ಕೊವಿಡ್‌ನಿಂದ ಮೃತ ಪಟ್ಟ ವ್ಯಕ್ತಿಯ ವಯಸ್ಸಿನ ನಿಬಂಧನೆಯೂ ಇಲ್ಲ ಎಂದು ರಾಜ್ಯ ಸರ್ಕಾರ ಹೊಸದಾಗಿ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT