ಸಾಂದರ್ಭಿಕ ಚಿತ್ರ 
ರಾಜ್ಯ

ಮತ್ತೊಬ್ಬ ಯುವಕನ ಜತೆ ಮದುವೆ: ಪ್ರೇಮಿಗಳಿಬ್ಬರು ಕೆಆರ್ ಎಸ್ ಹಿನ್ನೀರಿಗೆ ಹಾರಿ ಆತ್ಮಹತ್ಯೆ

ಮತ್ತೊಬ್ಬ ಯುವಕನ ಜತೆ ಮನೆಯವರು ಮದುವೆ ಮಾಡಿದ್ದರಿಂದ ಬೇಸತ್ತು ಪ್ರೇಮಿಗಳಿಬ್ಬರು(Lovers) ಕೆಆರ್‌ಎಸ್‌ ಹಿನ್ನೀರಿಗೆ(KRS river) ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ(Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ.

ಮಂಡ್ಯ: ಮತ್ತೊಬ್ಬ ಯುವಕನ ಜತೆ ಮನೆಯವರು ಮದುವೆ ಮಾಡಿದ್ದರಿಂದ ಬೇಸತ್ತು ಪ್ರೇಮಿಗಳಿಬ್ಬರು(Lovers) ಕೆಆರ್‌ಎಸ್‌ ಹಿನ್ನೀರಿಗೆ(KRS river) ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ(Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ. ಮೈಸೂರಿನ ಮೇಟಗಳ್ಳಿಯ ನವೀನ್ ಹಾಗೂ ನಿಸರ್ಗ ಆತ್ಮಹತ್ಯೆ(Suicide) ಮಾಡಿಕೊಂಡ ಯುವ ಪ್ರೇಮಿಗಳಾಗಿದ್ದಾರೆ. 

ಸಂಬಂಧಿಕರಾಗಿದ್ದ ನವೀನ್ ಮತ್ತು ನಿಸರ್ಗ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ನವೆಂಬರ್ 20ರಂದು ಯುವತಿ ನಿಸರ್ಗಳಿಗೆ ಬಲವಂತವಾಗಿ ಬೇರೆ ಯುವಕನ ಜೊತೆ ಮದುವೆ ಮಾಡಲಾಗಿತ್ತು. ಹೀಗಾಗಿ ನವೀನ್ ಮತ್ತು ನಿಸರ್ಗ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿ ಮೊನ್ನೆ ಡಿಸೆಂಬರ್ 1ರಂದು ಮನೆಯಿಂದ ಹೇಳದೆ ಹೊರಬಂದಿದ್ದಾರೆ. 

ಆತಂಕಗೊಂಡ ಕುಟುಂಬಸ್ಥರು ಇಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾಗ ಕೆಆರ್‌ಎಸ್ ನಾರ್ತ್ ಬ್ಯಾಂಕ್ ಮಿಲ್ಟ್ರಿ ಕ್ಯಾಂಪ್ ಬಳಿ ಹಿನ್ನೀರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ನಿಸರ್ಗ ಧರಿಸಿದ್ದ ಚೂಡಿದಾರದ ಶಾಲಿನಿಂದ ಇಬ್ಬರೂ ಸೊಂಟಕ್ಕೆ ಕಟ್ಟಿಕೊಂಡು ಹಿನ್ನೀರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. 

ಕೆಆರ್‌ಎಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT