ಹಲ್ಲೆಗೊಳಗಾಗಿದ್ದ ಅಧಿಕಾರಿ 
ರಾಜ್ಯ

ಅಕ್ರಮ ಮರಳು ಸಾಗಾಣಿಕೆ ತಡೆದ ಕಂದಾಯ ನಿರೀಕ್ಷಕ ಮತ್ತವರ ಕುಟುಂಬದವರ ಮೇಲೆ ಹಲ್ಲೆ: 10 ಆರೋಪಿಗಳ ಬಂಧನ

ಕಂದಾಯ ನಿರೀಕ್ಷಕ (Revenue inspector)ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿದ 10 ಮಂದಿ ಆರೋಪಿಗಳನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿ: ಕಂದಾಯ ನಿರೀಕ್ಷಕ (Revenue inspector)ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿದ 10 ಮಂದಿ ಆರೋಪಿಗಳನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಮರಳು ಸಾಗಣೆ ದಂಧೆಯನ್ನು ಭೇದಿಸಿದ್ದ ದ್ವೇಷದಿಂದ 10 ಮಂದಿ ಆರೋಪಿಗಳ ಗುಂಪು ವೆಂಕಟಸ್ವಾಮಿಯವರ ಮನೆಯೊಳಗೆ ಏಕಾಏಕಿ ನುಗ್ಗಿ ಹಲ್ಲೆ ಮಾಡಿದ್ದರು. ಇದರಿಂದ ವೆಂಕಟಸ್ವಾಮಿಯವರಿಗೆ ಗಾಯವಾಗಿದ್ದಲ್ಲದೆ ಅವರ ಕುಟುಂಬದವರಿಗೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆಯನ್ನು ಕೂಡ ಹಾಕಿದ್ದರು. 

ಈ ಬಗ್ಗೆ ವೆಂಕಟಸ್ವಾಮಿಯವರು ಬಳ್ಳಾರಿಯ ಬ್ರೂಸ್ ಪೇಟ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಾದ 24 ಗಂಟೆಯೊಳಗೆ 8 ಜನ ಆರೋಪಿಗಳನ್ನು ಮತ್ತು ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಬಂಧಿಸಲಾಗಿದೆ. 

ಬಳ್ಳಾರಿಯ ರೂಪನಗುಡಿ ಹೋಬಳಿಯಲ್ಲಿ 53 ವರ್ಷದ ಕಂದಾಯ ನಿರೀಕ್ಷಕ (Revenue inspector) ಹಾಗೂ ಗ್ರಾಮ ಲೆಕ್ಕಿಗನ (Village Accountant) ಮೇಲೆ 10 ಜನರ ತಂಡವೊಂದು ಮೊನ್ನೆ ಬುಧವಾರ ರಾತ್ರಿ ಹಲ್ಲೆ ನಡೆಸಿತ್ತು. 

ಇತ್ತೀಚೆಗೆ ಮರಳನ್ನು ಟ್ರ್ಯಾಕ್ಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಅದನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಕ್ಕೆ ಕಂದಾಯ ನಿರೀಕ್ಷಕ ವೆಂಕಟಸ್ವಾಮಿ ಹೆಚ್ ಅವರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT