ಹಲ್ಲೆಗೊಳಗಾಗಿದ್ದ ಅಧಿಕಾರಿ 
ರಾಜ್ಯ

ಅಕ್ರಮ ಮರಳು ಸಾಗಾಣಿಕೆ ತಡೆದ ಕಂದಾಯ ನಿರೀಕ್ಷಕ ಮತ್ತವರ ಕುಟುಂಬದವರ ಮೇಲೆ ಹಲ್ಲೆ: 10 ಆರೋಪಿಗಳ ಬಂಧನ

ಕಂದಾಯ ನಿರೀಕ್ಷಕ (Revenue inspector)ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿದ 10 ಮಂದಿ ಆರೋಪಿಗಳನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿ: ಕಂದಾಯ ನಿರೀಕ್ಷಕ (Revenue inspector)ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿದ 10 ಮಂದಿ ಆರೋಪಿಗಳನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಮರಳು ಸಾಗಣೆ ದಂಧೆಯನ್ನು ಭೇದಿಸಿದ್ದ ದ್ವೇಷದಿಂದ 10 ಮಂದಿ ಆರೋಪಿಗಳ ಗುಂಪು ವೆಂಕಟಸ್ವಾಮಿಯವರ ಮನೆಯೊಳಗೆ ಏಕಾಏಕಿ ನುಗ್ಗಿ ಹಲ್ಲೆ ಮಾಡಿದ್ದರು. ಇದರಿಂದ ವೆಂಕಟಸ್ವಾಮಿಯವರಿಗೆ ಗಾಯವಾಗಿದ್ದಲ್ಲದೆ ಅವರ ಕುಟುಂಬದವರಿಗೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆಯನ್ನು ಕೂಡ ಹಾಕಿದ್ದರು. 

ಈ ಬಗ್ಗೆ ವೆಂಕಟಸ್ವಾಮಿಯವರು ಬಳ್ಳಾರಿಯ ಬ್ರೂಸ್ ಪೇಟ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಾದ 24 ಗಂಟೆಯೊಳಗೆ 8 ಜನ ಆರೋಪಿಗಳನ್ನು ಮತ್ತು ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಬಂಧಿಸಲಾಗಿದೆ. 

ಬಳ್ಳಾರಿಯ ರೂಪನಗುಡಿ ಹೋಬಳಿಯಲ್ಲಿ 53 ವರ್ಷದ ಕಂದಾಯ ನಿರೀಕ್ಷಕ (Revenue inspector) ಹಾಗೂ ಗ್ರಾಮ ಲೆಕ್ಕಿಗನ (Village Accountant) ಮೇಲೆ 10 ಜನರ ತಂಡವೊಂದು ಮೊನ್ನೆ ಬುಧವಾರ ರಾತ್ರಿ ಹಲ್ಲೆ ನಡೆಸಿತ್ತು. 

ಇತ್ತೀಚೆಗೆ ಮರಳನ್ನು ಟ್ರ್ಯಾಕ್ಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಅದನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಕ್ಕೆ ಕಂದಾಯ ನಿರೀಕ್ಷಕ ವೆಂಕಟಸ್ವಾಮಿ ಹೆಚ್ ಅವರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT